ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.

ಬಳಿಕ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು. ನಗರ ಮಾತ್ರವಲ್ಲದೇ ಸುತ್ತಲಿನ ಹತ್ತಾರು ಗ್ರಾಮಗಳ ಸದ್ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಪ್ರಧಾನ ಅರ್ಚಕ ಶಿವಶ್ರೀ ವಿಶ್ವಾಸ್ ದೀಕ್ಷಿತರ ನೇತೃತ್ವದಲ್ಲಿ ಯಾಗ ನೆರವೇರಿಸಲಾಯಿತು. ಈ ವೇಳೆ ದೇಗುಲದ ರಾಜಗೋಪುರ ದಾನಿಗಳಾದ ಲೇ.ಸಂಜಿವಮ್ಮ, ಹನುಮಂತೇಗೌಡ ಹಾಗೂ ಪದ್ಮಾವತಮ್ಮ, ಮಹಾದೇವ ಅವರ ಕುಟುಂಬಸ್ಥರು, ಸಹಸ್ರಾರು ಭಕ್ತರು ಪೂಜೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago