ನಾಲ್ಕು ಸಿಸಿ ಕ್ಯಾಮೆರಾ, ಕ್ರೀಡಾ ಕೊಠಡಿಯಲ್ಲಿದ್ದ ಕ್ರೀಡಾ ಸಾಮಾಗ್ರಿಗಳನ್ನು ಕದ್ದೋಯ್ದ ಘಟನೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನವೆಂಬರ್ 17ರಂದು ನಡೆದಿದೆ.
ಒಂದು ಸಿಸಿ ಕ್ಯಾಮೆರಾ ಒಡೆದು ಹಾಕಿ, ಕ್ರೀಡಾ ಕೊಠಡಿಯ ಬೀಗ ಮುರಿದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸರಬರಾಜುಗೊಂಡಿದ್ದ ಥ್ರೋಬಾಲ್, 5ವಾಲಿಬಾಲ್, 6 ಶಟಲ್ ರಾಕೆಟ್, 6 ಬಾಲ್ ಬ್ಯಾಡ್ಮಿಂಟನ್ ರಾಕೆಟ್, 12 ಹ್ಯಾಂಡ್ ಬಾಲ್, 6ಫು ಟ್ ಬಾಲ್, 50 ಸ್ಕಿಪ್ಪಿಂಗ್ ರೋಪ್, 50ಟೆನ್ನಿಸ್ ಕಾಟ್, 3 ಸೈಡ್ ಡ್ರಮ್ಸ್, 1ಬೇಸ್ ಡ್ರಮ್, 4 ಕಬ್ಬಿಣದ ಪೋಲ್ ಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಕಳ್ಳರು.
ಉಪ ಪ್ರಾಂಶುಪಾಲರ ಕೊಠಡಿಯ ಬೀಗವನ್ನು ಒಡೆಯುವ ಯತ್ನ ಮಾಡಿರುವ ಕಳ್ಳರು, ಶಿಕ್ಷಕರ ಕೊಠಡಿಯಲ್ಲಿ ಕಬೋರ್ಡ್ ಗಳನ್ನು ತೆಗೆದು ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನೇದಿನೇ ಕಳ್ಳರ ಉಪಟಳ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಇತ್ತ ಗಮನಹರಿಸುವ ಕಾರ್ಯ ಮಾಡಬೇಕು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…