ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ರಾರಾಜಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್: ನಗರದ ಸೌಂದರ್ಯ ಹಾಳು: ವಾಹನ ಸವಾರರಿಗೆ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ  ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಲು  ನಗರಸಭೆ ವತಿಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ನಗರಸಭೆ ನಿಗದಿಪಡಿಸಿದಷ್ಟು ಮೊತ್ತ ಪಾವತಿಸಬೇಕಾಗಿದೆ. ಅನುಮತಿ ಪಡೆದಿರುವುದಿಕ್ಕಿಂತ ಹೆಚ್ಚಾಗಿ ಬೇಕಾಬಿಟ್ಟಿ ಫ್ಲೆಕ್ಸ್ ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳುಮಾಡುತ್ತಿದ್ದಾರೆ ಎಂದು ಗುಡುಗಿದರು.

ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.

ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಕೆ ಕುರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ತೆರವು ಮಾಡುತ್ತೇವೆ ಎಂದು ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ತಿಳಿಸಿದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

7 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

10 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

10 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

24 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago