ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…