ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ರಾರಾಜಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್: ನಗರದ ಸೌಂದರ್ಯ ಹಾಳು: ವಾಹನ ಸವಾರರಿಗೆ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ  ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಲು  ನಗರಸಭೆ ವತಿಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ನಗರಸಭೆ ನಿಗದಿಪಡಿಸಿದಷ್ಟು ಮೊತ್ತ ಪಾವತಿಸಬೇಕಾಗಿದೆ. ಅನುಮತಿ ಪಡೆದಿರುವುದಿಕ್ಕಿಂತ ಹೆಚ್ಚಾಗಿ ಬೇಕಾಬಿಟ್ಟಿ ಫ್ಲೆಕ್ಸ್ ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳುಮಾಡುತ್ತಿದ್ದಾರೆ ಎಂದು ಗುಡುಗಿದರು.

ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.

ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಕೆ ಕುರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ತೆರವು ಮಾಡುತ್ತೇವೆ ಎಂದು ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ತಿಳಿಸಿದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

3 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

4 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

7 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

9 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

14 hours ago