ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…