ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…