ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ರಾರಾಜಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್: ನಗರದ ಸೌಂದರ್ಯ ಹಾಳು: ವಾಹನ ಸವಾರರಿಗೆ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ  ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಲು  ನಗರಸಭೆ ವತಿಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ನಗರಸಭೆ ನಿಗದಿಪಡಿಸಿದಷ್ಟು ಮೊತ್ತ ಪಾವತಿಸಬೇಕಾಗಿದೆ. ಅನುಮತಿ ಪಡೆದಿರುವುದಿಕ್ಕಿಂತ ಹೆಚ್ಚಾಗಿ ಬೇಕಾಬಿಟ್ಟಿ ಫ್ಲೆಕ್ಸ್ ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳುಮಾಡುತ್ತಿದ್ದಾರೆ ಎಂದು ಗುಡುಗಿದರು.

ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.

ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಕೆ ಕುರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ತೆರವು ಮಾಡುತ್ತೇವೆ ಎಂದು ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ತಿಳಿಸಿದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

10 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

12 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

12 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

12 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

14 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

18 hours ago