ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ರಾರಾಜಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್: ನಗರದ ಸೌಂದರ್ಯ ಹಾಳು: ವಾಹನ ಸವಾರರಿಗೆ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

ನಗರದ ಸಾರ್ವಜನಿಕ ಸ್ಥಳ, ಪ್ರಮುಖ ವೃತ್ತಗಳು, ರಸ್ತೆಗಳ ಉದ್ದಕ್ಕೂ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳು ರಾರಾಜಿಸುತ್ತಿವೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳ ಹಾವಳಿ ದಿನದಿನಕ್ಕೆ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ  ಸಿ.ನರಸಿಂಹಮೂರ್ತಿ ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಮುಖಂಡರ ಹುಟ್ಟಿದ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಗಳು, ಬ್ಯಾನರ್ ಗಳು ಎಗ್ಗಿಲ್ಲದೆ ಎಲ್ಲೆಂದರಲ್ಲಿ ತಲೆಯೆತ್ತಿವೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಲು  ನಗರಸಭೆ ವತಿಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ನಗರಸಭೆ ನಿಗದಿಪಡಿಸಿದಷ್ಟು ಮೊತ್ತ ಪಾವತಿಸಬೇಕಾಗಿದೆ. ಅನುಮತಿ ಪಡೆದಿರುವುದಿಕ್ಕಿಂತ ಹೆಚ್ಚಾಗಿ ಬೇಕಾಬಿಟ್ಟಿ ಫ್ಲೆಕ್ಸ್ ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳುಮಾಡುತ್ತಿದ್ದಾರೆ ಎಂದು ಗುಡುಗಿದರು.

ರಸ್ತೆಗಳಲ್ಲಿ ಫ್ಲೆಕ್ಸ್ ಕಟ್ಟುವುದರಿಂದ ವಾಹನ ಸವಾರರಿಗೂ ಸಹ ಕಿರಿಕಿರಿ ಅನುಭವಿಸುವಂತಾಗಿದೆ. ಫ್ಲೆಕ್ಸ್ ಗಳಲ್ಲಿ ಅಳವಡಿಸಿರುವ ಮೊಳೆಗಳು ವಾಹನಗಳ ಟೈರ್ ಗಳಿಗೆ ಸಹ ಚುಚ್ಚುವ ಸಾಧ್ಯತೆಗಳಿವೆ. ಕೂಡಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಗಳನ್ನು ತೆರವು ಮಾಡಬೇಕೆಂದು ನಗರಸಭೆಗೆ ಮನವಿ ಮಾಡಿದರು.

ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಕೆ ಕುರಿತು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಥವಾ ಓರ್ಡಿಂಗ್ಸ್, ಬಂಟ್ಟಿಂಗ್ಸ್ ಅಳವಡಿಸಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ತೆರವು ಮಾಡುತ್ತೇವೆ ಎಂದು ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ತಿಳಿಸಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

14 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 day ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 day ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago