ನಗರದ ಸ್ವಚ್ಚತೆ, ಪರಿಸರ, ರಸ್ತೆ ವಿಸ್ತರಣೆ, ಸಿಸಿಟಿವಿ ಅಳವಡಿಕೆ, ಭದ್ರತೆ ಮೊದಲಾದ ವಿಚಾರಗಳಲ್ಲಿ ಸಾರ್ವಜನಿಕರ ಸಲಹೆಗಳನ್ನು ನಗರಸಭೆ ಗಂಭೀರವಾಗಿ ಪರಿಗಣಿಸಬೇಕು- ವಿವಿಧ ಸಂಘಟನೆಗಳ ಮುಖಂಡರು ಆಗ್ರಹ

ನಗರದ ರಾಜ್‌ಕುಮಾರ್ ಕಲಾ ಮಂದಿರದಲ್ಲಿ ನಗರಸಭೆಯಿಂದ 2025-26ನೇ ಸಾಲಿನ ಆಯವ್ಯಯ ಕುರಿತ ಸಾರ್ವಜನಿಕ ಸಮಾಲೋಚನ ಸಭೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ಸಾರ್ವಜನಿಕರಿಂದ ಸ್ವೀಕರಿಸುವ ಸಲಹೆ ಸೂಚನೆಗಳನ್ನು ಆಯವ್ಯಯದಲ್ಲಿ ಗಂಭೀರವಾಗಿ ಪರಿಗಣಿಸುವುದಿಲ್ಲ. ನಗರದ ನೈರ್ಮಲ್ಯ, ಪರಿಸರ ಸಂರಕ್ಷಣೆ ಕುರಿತು ನಾಲ್ಕು ವರ್ಷಗಳಿಂದ ನೀಡಿರುವ ಯಾವುದೇ ಸಲಹೆಗಳು ಕಾರ್ಯಗತವಾಗಿಲ್ಲ. ಸಾರ್ವಜನಿಕ ಸಮಾಲೋಚನಾ ಸಭೆ ಹೆಸರಿಗಷ್ಟೇ ನಡೆದಿದೆ ಎಂದು ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ದೂರಿದರು.

ಹಿಂದಿನ ಸಭೆಯಲ್ಲಿ ಅಧ್ಯಕ್ಷರು ಮಂಡಿಸಿದ್ದ ಆಯವ್ಯಯ, ವಿವಿಧ ಕಾಮಗಾರಿಗಳಿಗೆ ಮೀಸಲಿಟ್ಟಿರುವ ಹಣ ಹಾಗೂ ಸ್ಥಿತಿಗತಿಗಳ ಬಗ್ಗೆ ನಗರಸಭೆ ಕಾರ್ಯಪಾಲಕ ಎಂಜಿನಿಯರ್ ರಾಮೇಗೌಡ ಮಂಡಿಸಿದರು.

ರಸ್ತೆ ವಿಸ್ತರಣೆಗೆ ಅಡ್ಡಿ ಏನು…?

ನಗರದ ರಸ್ತೆ ವಿಸ್ತರಣೆ ಕುರಿತು ಹಂತ ಹಂತವಾಗಿ ಯೋಜನೆ ರೂಪಿಸಲಾಗುವುದು ಎಂದು ವರದಿಯಲ್ಲಿನ ಅಂಶಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಮಾಜಿ ಅಧ್ಯಕ್ಷ ಕೆ.ಎಂ.ಹನು- ಮಂತರಾಯಪ್ಪ, ಆಸ್ತಿ ಮಾಲೀಕರಿಗೆ ಪರಿಹಾರ ನೀಡಲು ನಗರಸಭೆಗೆ ಹೊರೆ- ಯಾಗುವುದಿಲ್ಲ. ಇದಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಿಂದೆ ಬಿದ್ದು ಕೆಲಸ ಮಾಡಿಸಬೇಕು. ನಗರದಲ್ಲಿ ರಸ್ತೆ ಸ್ಥಿತಿ ಸರಿಪಡಿಸಲು ಬಜೆಟ್‌ನಲ್ಲಿ ಹಣ ಇಟ್ಟಿದ್ದರೂ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ನಗರಸಭೆಯ ಕಂದಾಯ ವಸೂಲಿ ಚುರುಕುಗೊಳ್ಳಬೇಕು ಎಂದರು.

ನಗರಸಭೆ ಮಾಜಿ ಸದಸ್ಯ ಶಿವಕುಮಾರ್ ಮಾತನಾಡಿ, ರಸ್ತೆ ವಿಸ್ತರಣೆಗೆ ಅನಧಿಕೃತವಾಗಿ ಒತ್ತುವರಿ ಮಾಡಿರುವವರನ್ನು ತೆರವು ಮಾಡುವುದು ಕಷ್ಟಸಾಧ್ಯವಲ್ಲ. ನಗರಸಭೆಗೆ ಆದಾಯ ತರುವ ಕಲ್ಯಾಣ ಮಂದಿರಗಳು, ಪೆಟ್ರೋಲ್ ಬಂಕ್‌ಗಳು ಮೊದಲಾದ ವಾಣಿಜ್ಯ ಸಂಕೀರ್ಣಗ ಳಲ್ಲಿ ತೆರಿಗೆ ವಸೂಲಾತಿ, ಘನತ್ಯಾಜ್ಯ ನಿರ್ವಹಣೆ ಶುಲ್ಕಗಳನ್ನು ವಸೂಲಿ ಮಾಡಬೇಕು. ಫ್ಲೆಕ್ಸ್‌ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದರು.

ಸಭೆಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ನಗರದ ಸ್ವಚ್ಚತೆ, ಪರಿಸರ, ರಸ್ತೆ ವಿಸ್ತರಣೆ, ಸಿಸಿಟಿವಿ ಅಳವಡಿಕೆ, ಭದ್ರತೆ ಮೊದಲಾದ ವಿಚಾರಗಳಲ್ಲಿ ಸಾರ್ವಜನಿಕರ ಸಲಹೆಗಳನ್ನು ನಗರಸಭೆ ಗಂಭೀರವಾಗಿ ಪರಿಗಣಿಸಬೇಕಿದೆ. ನಗರಸಭೆಗೆ ಬರುವ ಆದಾಯ ಮೂಲಗಳನ್ನು ನಿರ್ಲಕ್ಷಿಸದೇ ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ. ನಗರದಲ್ಲಿ ಎಲ್ಲೆಂದರಲ್ಲಿ ಎಸೆಯುತ್ತಿರುವ ಕಸದ ನಿರ್ವಹಣೆಗೆ ಹೆಚ್ಚಿನ ಗಮನ ಹರಿಸಬೇಕಿದೆ. ನಾಗರಿಕರಿಂದ ನಗರಸಭೆಗೆ ಗ್ರಂಥಾಲಯ, ಆರೋಗ್ಯ, ಸಾರಿಗೆ ಮೊದಲಾದ ಕರವನ್ನು ಕಟ್ಟಿಸಿಕೊಂಡು ಸಂಬಂಧಿಸಿದ ಇಲಾಖೆಗೆ ನೀಡಲಾಗುತ್ತಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಕಾರ್ತಿಕ್ ಈಶ್ವರ್, ನಗರದ ರಸ್ತೆಗಳ ದುರಸ್ತಿಗೆ ಅನುದಾನ ಬಂದಿದೆ. ರಸ್ತೆ ವಿಸ್ತರಣೆ ಕುರಿತು ಸರ್ವ ಸದಸ್ಯರ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ನಗರದ ಉದ್ಯಾನಗಳನ್ನು ಸೂಕ್ತವಾಗಿ ನಿರ್ವಹಿಸಲಾಗುವುದು. ನಾಗರಿಕರ ಸಲಹೆ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ವಿವಿಧ ಇಲಾಖೆಗಳು ನಗರಸಭೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಮನವರಿಕೆ ಮಾಡಲಾಗುವುದು ಎಂದರು.

ನಗರಸಭೆಯ 2024-25ನೇ ಸಾಲಿನ ಆಯವ್ಯಯದಲ್ಲಿ ಆದಾಯ ₹67.21 ಕೋಟಿ ನಿರೀಕ್ಷಿಸಲಾಗಿದ್ದು, ಇದರಲ್ಲಿ ಖರ್ಚು ₹65.66 ಕೋಟಿ. ₹1.55 ಕೋಟಿ ಉಳಿತಾಯ ನಿರೀಕ್ಷಿಸಲಾಗಿದೆ. 2023-24ನೇ ಸಾಲಿನಲ್ಲಿ ₹12.25 ಕೋಟಿ ಉಳಿತಾಯವಾಗಿದೆ. 2024ರ ಡಿಸೆಂಬರ್ ಅಂತ್ಯದವರೆಗೆ ₹39.50ಕೋಟಿ ಕ್ರೋಡೀಕರಣವಾಗಿದ್ದು, ಇದರಲ್ಲಿ ₹29.55ಕೋಟಿ ಖರ್ಚಾಗಿದೆ. ಡಿಸೆಂಬರ್ ಅಂತ್ಯಕ್ಕೆ ಉಳಿಕೆ ₹9.94ಕೋಟಿ ಆಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್. ರವಿಕುಮಾರ್, ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

2 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

3 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

4 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

4 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

8 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

15 hours ago