ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ನಗರಸಭೆ ಪೌರಾಯುಕ್ತ ಕೆ.ಪರಮೇಶ್

 

ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.

ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ  ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಪೌರಕಾರ್ಮಿಕರ ಖಾಯಂ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ಸಮಾಜದಲ್ಲಿ ಪೌರಕಾರ್ಮಿಕರನ್ನು ಕೀಳಾಗಿ ನೋಡುವುದು ಇನ್ನೂ ಹೋಗಿಲ್ಲ. ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಪ್ರಕರಣಗಳು ಸಹ ನಡೆದಿವೆ. ಪೌರಕಾರ್ಮಿಕರಿಗೆ ರಕ್ಷಣೆ ನೀಡಬೇಕಿದ್ದು, ಶ್ರಮಿಕರಿಗೆ ಸಮಾಜ ಹಾಗೂ ಸಮುದಾಯ ಬೆಲೆ ನೀಡಬೇಕಿದೆ ಎಂದು ಹೇಳಿದರು.

ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

2 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

6 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

6 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

14 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago