ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ನಗರಸಭೆ ಪೌರಾಯುಕ್ತ ಕೆ.ಪರಮೇಶ್

 

ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.

ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ  ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಪೌರಕಾರ್ಮಿಕರ ಖಾಯಂ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ಸಮಾಜದಲ್ಲಿ ಪೌರಕಾರ್ಮಿಕರನ್ನು ಕೀಳಾಗಿ ನೋಡುವುದು ಇನ್ನೂ ಹೋಗಿಲ್ಲ. ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಪ್ರಕರಣಗಳು ಸಹ ನಡೆದಿವೆ. ಪೌರಕಾರ್ಮಿಕರಿಗೆ ರಕ್ಷಣೆ ನೀಡಬೇಕಿದ್ದು, ಶ್ರಮಿಕರಿಗೆ ಸಮಾಜ ಹಾಗೂ ಸಮುದಾಯ ಬೆಲೆ ನೀಡಬೇಕಿದೆ ಎಂದು ಹೇಳಿದರು.

ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago