ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.
ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…