ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.
ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…