ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಹೇಳಿದರು.
ನಗರಸಭೆ ವತಿಯಿಂದ ನಗರದ ಜಗಜೀವನ ರಾಂ ಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪೌರಕಾರ್ಮಿಕರು ರಾಜ್ಯ ಮಟ್ಟದಲ್ಲಿ ಸಂಘಟಿತರಾದ ಪರಿಣಾಮ ಇಂದು ಎಸ್.ಎಫ್.ಸಿ ಅನುದಾನದಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಹಿಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಈಗ ಸ್ಥಳೀಯ ಸಂಸ್ಥೆಗಳು ಸದೃಢವಾಗಿದ್ದು, ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡುತ್ತಿವೆ. ಪೌರ ಕಾರ್ಮಿಕರಿಗೆ ಜೀವ ವಿಮೆ ಮಾಡಿಸುವ ಮೂಲಕ ಸರ್ಕಾರ ಅವರಿಗೆ ಜೀವನ ಭದ್ರತೆ ಕಲ್ಪಿಸಿದೆ. ಸರ್ಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡಲು ಕ್ರಮ ವಹಿಸಲಾಗುವುದು ಪೌರ ಕಾರ್ಮಿಕರರು ತಮ್ಮ ಸಮಸ್ಯೆಗಳ ಬಗ್ಗೆ ಅಕಾರಿಗಳೊಂದಿಗೆ ಮುಕ್ತವಾಗಿ ತಿಳಿಸಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮೀನಾರಾಯಣ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…