ನಗರದ KSRTC ಡಿಪೋದಲ್ಲಿ ಕ್ಷಯ ರೋಗ ಪರೀಕ್ಷೆ ಹಾಗೂ ಅರಿವು ಆಂದೋಲನ

ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕದಲ್ಲಿ ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಕ್ಷಯ ರೋಗದ ಬಗ್ಗೆ ಅರಿವು ಮತ್ತು ರೋಗ ಲಕ್ಷಣ ಕಂಡು ಬಂದವರ ಗಂಟಲಿನ ಕಫಾ ಮಾದರಿಯನ್ನು ಸಂಗ್ರಹಿಸುವ ಆಂದೋಲನ ನಡೆಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕ್ಷಯರೋಗ ತಜ್ಞ ವೈದ್ಯ ಆನಂದ್ ಜು.17ರಿಂದ ಆ.2ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ನಡೆಸಿದ್ದಾರೆ. 2025ರ ಒಳಗೆ ಕ್ಷಯ ಮುಕ್ತ ಭಾರತ ಮಾಡುವುದು ಇದರ ಉದ್ದೇಶವಾಗಿದೆ ಎಂದರು.

ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯ ರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ ಹೊರ ಬರುವ ತುಂತುರುಗಳಿಂದ ಈ ರೋಗಾಣುಗಳು ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಅವನಿಗೆ ಸೋಂಕು ಉಂಟಾಗುತ್ತದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟ ಸತತವಾದ ಕೆಮ್ಮು, ಜ್ವರ, ಸಂಜೆ ವೇಳೆ ಜ್ವರ ಬರುವುದು, ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದು ವಿವರಿಸಿದರು.

ಇದೇ ವೇಳೆ ಕ್ಷಯ ರೋಗದ ಲಕ್ಷಣ, ಪರೀಕ್ಷೆ, ಅಪಾಯದ ಬಗ್ಗೆ, ಕ್ಷಯ ಗುಣಪಡಿಸುವ ಬಗ್ಗೆ ಡಿಪೋದಲ್ಲಿದ್ದ ಚಾಲಕರು, ನಿರ್ವಾಹಕರು, ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಬಳಿಕ ಅವರನ್ನು ಕ್ಷಯ ಪರೀಕ್ಷೆಗೆ ಒಳಪಡಿಸಲಾಯಿತು.

ಈ ವೇಳೆ ಡಿಪೋ ವ್ಯವಸ್ಥಾಪಕ ಎಸ್.ಆರ್.ಸಂತೋಷ್, ಕ್ಷಯರೋಗ ಸಂದರ್ಶಕ ಯುವರಾಜು, ಹಿರಿಯ ಚಿಕಿತ್ಸಕ ಆನಂದ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago