ನಗರದ KSRTC ಡಿಪೋದಲ್ಲಿ ಕ್ಷಯ ರೋಗ ಪರೀಕ್ಷೆ ಹಾಗೂ ಅರಿವು ಆಂದೋಲನ

ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕದಲ್ಲಿ ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಕ್ಷಯ ರೋಗದ ಬಗ್ಗೆ ಅರಿವು ಮತ್ತು ರೋಗ ಲಕ್ಷಣ ಕಂಡು ಬಂದವರ ಗಂಟಲಿನ ಕಫಾ ಮಾದರಿಯನ್ನು ಸಂಗ್ರಹಿಸುವ ಆಂದೋಲನ ನಡೆಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕ್ಷಯರೋಗ ತಜ್ಞ ವೈದ್ಯ ಆನಂದ್ ಜು.17ರಿಂದ ಆ.2ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ನಡೆಸಿದ್ದಾರೆ. 2025ರ ಒಳಗೆ ಕ್ಷಯ ಮುಕ್ತ ಭಾರತ ಮಾಡುವುದು ಇದರ ಉದ್ದೇಶವಾಗಿದೆ ಎಂದರು.

ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯ ರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ ಹೊರ ಬರುವ ತುಂತುರುಗಳಿಂದ ಈ ರೋಗಾಣುಗಳು ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಅವನಿಗೆ ಸೋಂಕು ಉಂಟಾಗುತ್ತದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟ ಸತತವಾದ ಕೆಮ್ಮು, ಜ್ವರ, ಸಂಜೆ ವೇಳೆ ಜ್ವರ ಬರುವುದು, ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದು ವಿವರಿಸಿದರು.

ಇದೇ ವೇಳೆ ಕ್ಷಯ ರೋಗದ ಲಕ್ಷಣ, ಪರೀಕ್ಷೆ, ಅಪಾಯದ ಬಗ್ಗೆ, ಕ್ಷಯ ಗುಣಪಡಿಸುವ ಬಗ್ಗೆ ಡಿಪೋದಲ್ಲಿದ್ದ ಚಾಲಕರು, ನಿರ್ವಾಹಕರು, ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಬಳಿಕ ಅವರನ್ನು ಕ್ಷಯ ಪರೀಕ್ಷೆಗೆ ಒಳಪಡಿಸಲಾಯಿತು.

ಈ ವೇಳೆ ಡಿಪೋ ವ್ಯವಸ್ಥಾಪಕ ಎಸ್.ಆರ್.ಸಂತೋಷ್, ಕ್ಷಯರೋಗ ಸಂದರ್ಶಕ ಯುವರಾಜು, ಹಿರಿಯ ಚಿಕಿತ್ಸಕ ಆನಂದ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago