ನಗರದ KSRTC ಡಿಪೋದಲ್ಲಿ ಕ್ಷಯ ರೋಗ ಪರೀಕ್ಷೆ ಹಾಗೂ ಅರಿವು ಆಂದೋಲನ

ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕದಲ್ಲಿ ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಕ್ಷಯ ರೋಗದ ಬಗ್ಗೆ ಅರಿವು ಮತ್ತು ರೋಗ ಲಕ್ಷಣ ಕಂಡು ಬಂದವರ ಗಂಟಲಿನ ಕಫಾ ಮಾದರಿಯನ್ನು ಸಂಗ್ರಹಿಸುವ ಆಂದೋಲನ ನಡೆಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕ್ಷಯರೋಗ ತಜ್ಞ ವೈದ್ಯ ಆನಂದ್ ಜು.17ರಿಂದ ಆ.2ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ನಡೆಸಿದ್ದಾರೆ. 2025ರ ಒಳಗೆ ಕ್ಷಯ ಮುಕ್ತ ಭಾರತ ಮಾಡುವುದು ಇದರ ಉದ್ದೇಶವಾಗಿದೆ ಎಂದರು.

ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯ ರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ ಹೊರ ಬರುವ ತುಂತುರುಗಳಿಂದ ಈ ರೋಗಾಣುಗಳು ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಅವನಿಗೆ ಸೋಂಕು ಉಂಟಾಗುತ್ತದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟ ಸತತವಾದ ಕೆಮ್ಮು, ಜ್ವರ, ಸಂಜೆ ವೇಳೆ ಜ್ವರ ಬರುವುದು, ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದು ವಿವರಿಸಿದರು.

ಇದೇ ವೇಳೆ ಕ್ಷಯ ರೋಗದ ಲಕ್ಷಣ, ಪರೀಕ್ಷೆ, ಅಪಾಯದ ಬಗ್ಗೆ, ಕ್ಷಯ ಗುಣಪಡಿಸುವ ಬಗ್ಗೆ ಡಿಪೋದಲ್ಲಿದ್ದ ಚಾಲಕರು, ನಿರ್ವಾಹಕರು, ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಬಳಿಕ ಅವರನ್ನು ಕ್ಷಯ ಪರೀಕ್ಷೆಗೆ ಒಳಪಡಿಸಲಾಯಿತು.

ಈ ವೇಳೆ ಡಿಪೋ ವ್ಯವಸ್ಥಾಪಕ ಎಸ್.ಆರ್.ಸಂತೋಷ್, ಕ್ಷಯರೋಗ ಸಂದರ್ಶಕ ಯುವರಾಜು, ಹಿರಿಯ ಚಿಕಿತ್ಸಕ ಆನಂದ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

2 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

5 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

20 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

24 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago