ನಗರದ KSRTC ಡಿಪೋದಲ್ಲಿ ಕ್ಷಯ ರೋಗ ಪರೀಕ್ಷೆ ಹಾಗೂ ಅರಿವು ಆಂದೋಲನ

ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕದಲ್ಲಿ ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಕ್ಷಯ ರೋಗದ ಬಗ್ಗೆ ಅರಿವು ಮತ್ತು ರೋಗ ಲಕ್ಷಣ ಕಂಡು ಬಂದವರ ಗಂಟಲಿನ ಕಫಾ ಮಾದರಿಯನ್ನು ಸಂಗ್ರಹಿಸುವ ಆಂದೋಲನ ನಡೆಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕ್ಷಯರೋಗ ತಜ್ಞ ವೈದ್ಯ ಆನಂದ್ ಜು.17ರಿಂದ ಆ.2ರವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸಮೀಕ್ಷೆ ನಡೆಸಿದ್ದಾರೆ. 2025ರ ಒಳಗೆ ಕ್ಷಯ ಮುಕ್ತ ಭಾರತ ಮಾಡುವುದು ಇದರ ಉದ್ದೇಶವಾಗಿದೆ ಎಂದರು.

ಕ್ಷಯ ರೋಗವು ಮೈಕೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯ ರೋಗಿಯು ಕೆಮ್ಮಿದಾಗ ಅಥವಾ ಸೀನಿದಾಗ ಹೊರ ಬರುವ ತುಂತುರುಗಳಿಂದ ಈ ರೋಗಾಣುಗಳು ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶ ಸೇರಿ ಅವನಿಗೆ ಸೋಂಕು ಉಂಟಾಗುತ್ತದೆ. ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟ ಸತತವಾದ ಕೆಮ್ಮು, ಜ್ವರ, ಸಂಜೆ ವೇಳೆ ಜ್ವರ ಬರುವುದು, ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದು ವಿವರಿಸಿದರು.

ಇದೇ ವೇಳೆ ಕ್ಷಯ ರೋಗದ ಲಕ್ಷಣ, ಪರೀಕ್ಷೆ, ಅಪಾಯದ ಬಗ್ಗೆ, ಕ್ಷಯ ಗುಣಪಡಿಸುವ ಬಗ್ಗೆ ಡಿಪೋದಲ್ಲಿದ್ದ ಚಾಲಕರು, ನಿರ್ವಾಹಕರು, ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಬಳಿಕ ಅವರನ್ನು ಕ್ಷಯ ಪರೀಕ್ಷೆಗೆ ಒಳಪಡಿಸಲಾಯಿತು.

ಈ ವೇಳೆ ಡಿಪೋ ವ್ಯವಸ್ಥಾಪಕ ಎಸ್.ಆರ್.ಸಂತೋಷ್, ಕ್ಷಯರೋಗ ಸಂದರ್ಶಕ ಯುವರಾಜು, ಹಿರಿಯ ಚಿಕಿತ್ಸಕ ಆನಂದ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

7 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

8 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

20 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

23 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago