ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಗಡಿಪಾರು ಪ್ರಕರಣ: ಮುತ್ತೂರಿಗೆ ಆಸ್ಪತ್ರೆ, ಓವರ್ ಹೆಡ್ ಟ್ಯಾಂಕ್ ಬೇಕೆಂದು ಒತ್ತಾಯಿಸಿದ್ದಕ್ಕೆ ಗಡಿಪಾರು: ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪ

ನಗರದ ಮುತ್ತೂರಲ್ಲಿ (6ನೇ ವಾರ್ಡ್) ಆಸ್ಪತ್ರೆ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದ್ದನ್ನೇ ನೆಪವಾಗಿಸಿಕೊಂಡು ರಾಜಕೀಯ ಪಕ್ಷಗಳು ನನ್ನನ್ನು ಗಡಿಪಾರು ಮಾಡಿಸಿವೆ. ರಾಜಕಾರಣಿಗಳ ಈ ಷಡ್ಯಂತ್ರ್ಯಕ್ಕೆ ಮತದಾರರು ಸರಿಯಾದ ಕಲಿಸಲಿದ್ದಾರೆ ಎಂದು ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪಿಸಿದ್ದಾರೆ.

ಗಡಿಪಾರು ಮಾಡಿರುವ ಕುರಿತು ‘ಪಬ್ಲಿಕ್.ಮಿರ್ಚಿ ನ್ಯೂಸ್’ ಜೊತೆ ಮಾತನಾಡಿದ ಅವರು, ನಗರಸಭಾ ಸದಸ್ಯನಾದ ಬಳಿಕ ಮುತ್ತೂರು ಗ್ರಾಮದ ಜನರ ಆಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದೇನೆ. ರಸ್ತೆ, ಚರಂಡಿ, ಬೀದಿ ದೀಪ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದೇನೆ. 5000 ಜನಸಂಖ್ಯೆ ಒಳಗೊಂಡಿರುವ ವಾರ್ಡಿನಲ್ಲಿ ಆಸ್ಪತ್ರೆ ವ್ಯವಸ್ಥೆ ಹಾಗೂ ಓವರ್ ಹೆಡ್ ಟ್ಯಾಂಕ್ ಇಲ್ಲದಿರುವ ಕೊರಗಿತ್ತು. ಈ ಕುರಿತು ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ‌ ಮಾಡಿದ್ದೆ. ಆದರೆ, ಯಾರೂ ಕೂಡ ಸ್ಪಂದಿಸಿರಲಿಲ್ಲ. ಇದರಿಂದ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು‌ ಸಿದ್ಧತೆ ನಡೆಸಿದ್ದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮತ ಕಳೆದುಕೊಳ್ಳುವ ಆತಂಕದಿಂದ ಷಡ್ಯಂತ್ರ ರೂಪಿಸಿ ರಾಜಕೀಯ ವ್ಯಕ್ತಿಗಳು ಗಡಿಪಾರು ಮಾಡಿಸಿದ್ದಾರೆ ಎಂದು ಗಂಭೀರ ಆರೋಪ‌ ಮಾಡಿದರು.

ನಗರಸಭೆಯಲ್ಲಿ‌ ಕಾಂಗ್ರೆಸ್ಸಿಗೆ ನೀಡಿದ ಬೆಂಬಲ ಹಿಂಪಡೆದ ಬಳಿಕ ವಿವಿಧ ಮುಖಂಡರು ತಮ್ಮ ತಮ್ಮ ಪಕ್ಷಕ್ಕೆ ಸೇರುವಂತೆ ಒತ್ತಡ ಹೇರಿದ್ದರು. ಆದರೆ, ವಾರ್ಡ್ ಮತದಾರರ ಒತ್ತಾಸೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದೆ. ನಾಮಪತ್ರ ಸಲ್ಲಿಸುವ ಕೊನೆ ದಿನ ರಂಗಪ್ಪ ಸರ್ಕಲ್ ಕಚೇರಿಯಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಬೇಕೆಂದು ತೀರ್ಮಾನಿಸಿದ್ದೆ. ಅಷ್ಟರಲ್ಲಿ ನನ್ನನ್ನು ಗಡಿಪಾರು ಮಾಡಿಸಿದ್ದಾರೆ ಎಂದು ಕಿಡಿಕಾರಿದರು.

ತಹಶೀಲ್ದಾರ್ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೂ ರಾಜಕೀಯ ವ್ಯಕ್ತಿಗಳು ಚುನಾವಣೆಗೆ ನಿಲ್ಲದಂತೆ ಮಾಡಲು ಅಧಿಕಾರಿಗಳ‌ ಮೇಲೆ ಒತ್ತಡ ಹೇರಿ ಆದೇಶ ಜಾರಿ‌ ಮಾಡಿಸಿದ್ದಾರೆ. ವಾರ್ಡಿನ ಅಭಿವೃದ್ಧಿಗೆ ಶ್ರಮಿಸದ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೂಡ ರಾಜಕೀಯ ಷಡ್ಯಂತ್ರದಿಂದ ನನ್ನ ಮೇಲೆ ರೌಡಿಶೀಟರ್ ಹಾಕಲಾಗಿತ್ತು. ಆ ನಂತರ ದಾನಿಗಳ ನೆರವಿನಿಂದ ರಾಜ್ಯ ಪ್ರಾಣಿ ಪಕ್ಷಿ ದಾಸೋಹ ಟ್ರಸ್ಟ್ ಮಾಡಿಕೊಂಡು, ಪ್ರಾಣಿ ಪಕ್ಷಿಗಳಿಗೆ ನೀರು ಮತ್ತು ಆಹಾರ ನೀಡುತ್ತಾ‌ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.

ಶ್ರೀರಾಮ ನವಮಿ ಹಬ್ಬದ ದಿನ ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು‌ ಮಹಿಳೆಯರು ನೀಡಿದ‌ ಮಾಹಿತಿಯನ್ನು ನಾನೇ ಪೊಲೀಸರಿಗೆ ಕರೆ‌ ಮಾಡಿ ತಿಳಿಸಿದ್ದೆ. ಆದರೆ, ಅವರು ಬರಲಿಲ್ಲ. ಆಗ ನಾನೇ ಖುದ್ದು ಜೂಜಾಟದ ಸ್ಥಳಕ್ಕೆ ತೆರಳಿ ತೆರವು ಮಾಡುವಂತೆ ಎಲ್ಲರಿಗೂ ಹೇಳುತ್ತಿದ್ದೆ. ಅಷ್ಟರಲ್ಲಿ ಅಲ್ಲಿಗೆ ಬಂದ ಪೊಲೀಸರು ಠಾಣೆಗೆ ಕರೆಸಿ, ಪ್ರಕರಣ ದಾಖಲಿಸಿದರು ಎಂದು ದೂರಿದರು.

ಸದ್ಯ ಗಡಿಪಾರು ಆದೇಶದ ವಿರುದ್ಧ ನ್ಯಾಯಾಲಯದ‌ ಮೊರೆ ಹೋಗಿದ್ದೇನೆ.‌ ನ್ಯಾಯ‌ ಸಿಗುವ ವಿಶ್ವಾಸವಿದೆ.‌ ನನ್ನನ್ನು ಗಡಿಪಾರು ಮಾಡಿಸಿದ್ದು ಷಡ್ಯಂತ್ರ್ಯವಲ್ಲದೇ ಬೇರೇನೂ ಅಲ್ಲ. ಇದು ಖಂಡನೀಯ‌ ಎಂದು ಟೀಕಿಸಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

10 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago