ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಗಡಿಪಾರು ಪ್ರಕರಣ: ಮುತ್ತೂರಿಗೆ ಆಸ್ಪತ್ರೆ, ಓವರ್ ಹೆಡ್ ಟ್ಯಾಂಕ್ ಬೇಕೆಂದು ಒತ್ತಾಯಿಸಿದ್ದಕ್ಕೆ ಗಡಿಪಾರು: ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪ

ನಗರದ ಮುತ್ತೂರಲ್ಲಿ (6ನೇ ವಾರ್ಡ್) ಆಸ್ಪತ್ರೆ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದ್ದನ್ನೇ ನೆಪವಾಗಿಸಿಕೊಂಡು ರಾಜಕೀಯ ಪಕ್ಷಗಳು ನನ್ನನ್ನು ಗಡಿಪಾರು ಮಾಡಿಸಿವೆ. ರಾಜಕಾರಣಿಗಳ ಈ ಷಡ್ಯಂತ್ರ್ಯಕ್ಕೆ ಮತದಾರರು ಸರಿಯಾದ ಕಲಿಸಲಿದ್ದಾರೆ ಎಂದು ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪಿಸಿದ್ದಾರೆ.

ಗಡಿಪಾರು ಮಾಡಿರುವ ಕುರಿತು ‘ಪಬ್ಲಿಕ್.ಮಿರ್ಚಿ ನ್ಯೂಸ್’ ಜೊತೆ ಮಾತನಾಡಿದ ಅವರು, ನಗರಸಭಾ ಸದಸ್ಯನಾದ ಬಳಿಕ ಮುತ್ತೂರು ಗ್ರಾಮದ ಜನರ ಆಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದೇನೆ. ರಸ್ತೆ, ಚರಂಡಿ, ಬೀದಿ ದೀಪ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದೇನೆ. 5000 ಜನಸಂಖ್ಯೆ ಒಳಗೊಂಡಿರುವ ವಾರ್ಡಿನಲ್ಲಿ ಆಸ್ಪತ್ರೆ ವ್ಯವಸ್ಥೆ ಹಾಗೂ ಓವರ್ ಹೆಡ್ ಟ್ಯಾಂಕ್ ಇಲ್ಲದಿರುವ ಕೊರಗಿತ್ತು. ಈ ಕುರಿತು ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ‌ ಮಾಡಿದ್ದೆ. ಆದರೆ, ಯಾರೂ ಕೂಡ ಸ್ಪಂದಿಸಿರಲಿಲ್ಲ. ಇದರಿಂದ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು‌ ಸಿದ್ಧತೆ ನಡೆಸಿದ್ದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮತ ಕಳೆದುಕೊಳ್ಳುವ ಆತಂಕದಿಂದ ಷಡ್ಯಂತ್ರ ರೂಪಿಸಿ ರಾಜಕೀಯ ವ್ಯಕ್ತಿಗಳು ಗಡಿಪಾರು ಮಾಡಿಸಿದ್ದಾರೆ ಎಂದು ಗಂಭೀರ ಆರೋಪ‌ ಮಾಡಿದರು.

ನಗರಸಭೆಯಲ್ಲಿ‌ ಕಾಂಗ್ರೆಸ್ಸಿಗೆ ನೀಡಿದ ಬೆಂಬಲ ಹಿಂಪಡೆದ ಬಳಿಕ ವಿವಿಧ ಮುಖಂಡರು ತಮ್ಮ ತಮ್ಮ ಪಕ್ಷಕ್ಕೆ ಸೇರುವಂತೆ ಒತ್ತಡ ಹೇರಿದ್ದರು. ಆದರೆ, ವಾರ್ಡ್ ಮತದಾರರ ಒತ್ತಾಸೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದೆ. ನಾಮಪತ್ರ ಸಲ್ಲಿಸುವ ಕೊನೆ ದಿನ ರಂಗಪ್ಪ ಸರ್ಕಲ್ ಕಚೇರಿಯಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಬೇಕೆಂದು ತೀರ್ಮಾನಿಸಿದ್ದೆ. ಅಷ್ಟರಲ್ಲಿ ನನ್ನನ್ನು ಗಡಿಪಾರು ಮಾಡಿಸಿದ್ದಾರೆ ಎಂದು ಕಿಡಿಕಾರಿದರು.

ತಹಶೀಲ್ದಾರ್ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೂ ರಾಜಕೀಯ ವ್ಯಕ್ತಿಗಳು ಚುನಾವಣೆಗೆ ನಿಲ್ಲದಂತೆ ಮಾಡಲು ಅಧಿಕಾರಿಗಳ‌ ಮೇಲೆ ಒತ್ತಡ ಹೇರಿ ಆದೇಶ ಜಾರಿ‌ ಮಾಡಿಸಿದ್ದಾರೆ. ವಾರ್ಡಿನ ಅಭಿವೃದ್ಧಿಗೆ ಶ್ರಮಿಸದ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೂಡ ರಾಜಕೀಯ ಷಡ್ಯಂತ್ರದಿಂದ ನನ್ನ ಮೇಲೆ ರೌಡಿಶೀಟರ್ ಹಾಕಲಾಗಿತ್ತು. ಆ ನಂತರ ದಾನಿಗಳ ನೆರವಿನಿಂದ ರಾಜ್ಯ ಪ್ರಾಣಿ ಪಕ್ಷಿ ದಾಸೋಹ ಟ್ರಸ್ಟ್ ಮಾಡಿಕೊಂಡು, ಪ್ರಾಣಿ ಪಕ್ಷಿಗಳಿಗೆ ನೀರು ಮತ್ತು ಆಹಾರ ನೀಡುತ್ತಾ‌ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.

ಶ್ರೀರಾಮ ನವಮಿ ಹಬ್ಬದ ದಿನ ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು‌ ಮಹಿಳೆಯರು ನೀಡಿದ‌ ಮಾಹಿತಿಯನ್ನು ನಾನೇ ಪೊಲೀಸರಿಗೆ ಕರೆ‌ ಮಾಡಿ ತಿಳಿಸಿದ್ದೆ. ಆದರೆ, ಅವರು ಬರಲಿಲ್ಲ. ಆಗ ನಾನೇ ಖುದ್ದು ಜೂಜಾಟದ ಸ್ಥಳಕ್ಕೆ ತೆರಳಿ ತೆರವು ಮಾಡುವಂತೆ ಎಲ್ಲರಿಗೂ ಹೇಳುತ್ತಿದ್ದೆ. ಅಷ್ಟರಲ್ಲಿ ಅಲ್ಲಿಗೆ ಬಂದ ಪೊಲೀಸರು ಠಾಣೆಗೆ ಕರೆಸಿ, ಪ್ರಕರಣ ದಾಖಲಿಸಿದರು ಎಂದು ದೂರಿದರು.

ಸದ್ಯ ಗಡಿಪಾರು ಆದೇಶದ ವಿರುದ್ಧ ನ್ಯಾಯಾಲಯದ‌ ಮೊರೆ ಹೋಗಿದ್ದೇನೆ.‌ ನ್ಯಾಯ‌ ಸಿಗುವ ವಿಶ್ವಾಸವಿದೆ.‌ ನನ್ನನ್ನು ಗಡಿಪಾರು ಮಾಡಿಸಿದ್ದು ಷಡ್ಯಂತ್ರ್ಯವಲ್ಲದೇ ಬೇರೇನೂ ಅಲ್ಲ. ಇದು ಖಂಡನೀಯ‌ ಎಂದು ಟೀಕಿಸಿದ್ದಾರೆ.

Ramesh Babu

Journalist

Recent Posts

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

4 minutes ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

12 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

13 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

1 day ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago