ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಗಡಿಪಾರು ಪ್ರಕರಣ: ಮುತ್ತೂರಿಗೆ ಆಸ್ಪತ್ರೆ, ಓವರ್ ಹೆಡ್ ಟ್ಯಾಂಕ್ ಬೇಕೆಂದು ಒತ್ತಾಯಿಸಿದ್ದಕ್ಕೆ ಗಡಿಪಾರು: ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪ

ನಗರದ ಮುತ್ತೂರಲ್ಲಿ (6ನೇ ವಾರ್ಡ್) ಆಸ್ಪತ್ರೆ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದ್ದನ್ನೇ ನೆಪವಾಗಿಸಿಕೊಂಡು ರಾಜಕೀಯ ಪಕ್ಷಗಳು ನನ್ನನ್ನು ಗಡಿಪಾರು ಮಾಡಿಸಿವೆ. ರಾಜಕಾರಣಿಗಳ ಈ ಷಡ್ಯಂತ್ರ್ಯಕ್ಕೆ ಮತದಾರರು ಸರಿಯಾದ ಕಲಿಸಲಿದ್ದಾರೆ ಎಂದು ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪಿಸಿದ್ದಾರೆ.

ಗಡಿಪಾರು ಮಾಡಿರುವ ಕುರಿತು ‘ಪಬ್ಲಿಕ್.ಮಿರ್ಚಿ ನ್ಯೂಸ್’ ಜೊತೆ ಮಾತನಾಡಿದ ಅವರು, ನಗರಸಭಾ ಸದಸ್ಯನಾದ ಬಳಿಕ ಮುತ್ತೂರು ಗ್ರಾಮದ ಜನರ ಆಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದೇನೆ. ರಸ್ತೆ, ಚರಂಡಿ, ಬೀದಿ ದೀಪ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದೇನೆ. 5000 ಜನಸಂಖ್ಯೆ ಒಳಗೊಂಡಿರುವ ವಾರ್ಡಿನಲ್ಲಿ ಆಸ್ಪತ್ರೆ ವ್ಯವಸ್ಥೆ ಹಾಗೂ ಓವರ್ ಹೆಡ್ ಟ್ಯಾಂಕ್ ಇಲ್ಲದಿರುವ ಕೊರಗಿತ್ತು. ಈ ಕುರಿತು ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ‌ ಮಾಡಿದ್ದೆ. ಆದರೆ, ಯಾರೂ ಕೂಡ ಸ್ಪಂದಿಸಿರಲಿಲ್ಲ. ಇದರಿಂದ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು‌ ಸಿದ್ಧತೆ ನಡೆಸಿದ್ದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮತ ಕಳೆದುಕೊಳ್ಳುವ ಆತಂಕದಿಂದ ಷಡ್ಯಂತ್ರ ರೂಪಿಸಿ ರಾಜಕೀಯ ವ್ಯಕ್ತಿಗಳು ಗಡಿಪಾರು ಮಾಡಿಸಿದ್ದಾರೆ ಎಂದು ಗಂಭೀರ ಆರೋಪ‌ ಮಾಡಿದರು.

ನಗರಸಭೆಯಲ್ಲಿ‌ ಕಾಂಗ್ರೆಸ್ಸಿಗೆ ನೀಡಿದ ಬೆಂಬಲ ಹಿಂಪಡೆದ ಬಳಿಕ ವಿವಿಧ ಮುಖಂಡರು ತಮ್ಮ ತಮ್ಮ ಪಕ್ಷಕ್ಕೆ ಸೇರುವಂತೆ ಒತ್ತಡ ಹೇರಿದ್ದರು. ಆದರೆ, ವಾರ್ಡ್ ಮತದಾರರ ಒತ್ತಾಸೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತಯಾರಿ ನಡೆಸಿದ್ದೆ. ನಾಮಪತ್ರ ಸಲ್ಲಿಸುವ ಕೊನೆ ದಿನ ರಂಗಪ್ಪ ಸರ್ಕಲ್ ಕಚೇರಿಯಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಬೇಕೆಂದು ತೀರ್ಮಾನಿಸಿದ್ದೆ. ಅಷ್ಟರಲ್ಲಿ ನನ್ನನ್ನು ಗಡಿಪಾರು ಮಾಡಿಸಿದ್ದಾರೆ ಎಂದು ಕಿಡಿಕಾರಿದರು.

ತಹಶೀಲ್ದಾರ್ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೂ ರಾಜಕೀಯ ವ್ಯಕ್ತಿಗಳು ಚುನಾವಣೆಗೆ ನಿಲ್ಲದಂತೆ ಮಾಡಲು ಅಧಿಕಾರಿಗಳ‌ ಮೇಲೆ ಒತ್ತಡ ಹೇರಿ ಆದೇಶ ಜಾರಿ‌ ಮಾಡಿಸಿದ್ದಾರೆ. ವಾರ್ಡಿನ ಅಭಿವೃದ್ಧಿಗೆ ಶ್ರಮಿಸದ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೂಡ ರಾಜಕೀಯ ಷಡ್ಯಂತ್ರದಿಂದ ನನ್ನ ಮೇಲೆ ರೌಡಿಶೀಟರ್ ಹಾಕಲಾಗಿತ್ತು. ಆ ನಂತರ ದಾನಿಗಳ ನೆರವಿನಿಂದ ರಾಜ್ಯ ಪ್ರಾಣಿ ಪಕ್ಷಿ ದಾಸೋಹ ಟ್ರಸ್ಟ್ ಮಾಡಿಕೊಂಡು, ಪ್ರಾಣಿ ಪಕ್ಷಿಗಳಿಗೆ ನೀರು ಮತ್ತು ಆಹಾರ ನೀಡುತ್ತಾ‌ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.

ಶ್ರೀರಾಮ ನವಮಿ ಹಬ್ಬದ ದಿನ ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು‌ ಮಹಿಳೆಯರು ನೀಡಿದ‌ ಮಾಹಿತಿಯನ್ನು ನಾನೇ ಪೊಲೀಸರಿಗೆ ಕರೆ‌ ಮಾಡಿ ತಿಳಿಸಿದ್ದೆ. ಆದರೆ, ಅವರು ಬರಲಿಲ್ಲ. ಆಗ ನಾನೇ ಖುದ್ದು ಜೂಜಾಟದ ಸ್ಥಳಕ್ಕೆ ತೆರಳಿ ತೆರವು ಮಾಡುವಂತೆ ಎಲ್ಲರಿಗೂ ಹೇಳುತ್ತಿದ್ದೆ. ಅಷ್ಟರಲ್ಲಿ ಅಲ್ಲಿಗೆ ಬಂದ ಪೊಲೀಸರು ಠಾಣೆಗೆ ಕರೆಸಿ, ಪ್ರಕರಣ ದಾಖಲಿಸಿದರು ಎಂದು ದೂರಿದರು.

ಸದ್ಯ ಗಡಿಪಾರು ಆದೇಶದ ವಿರುದ್ಧ ನ್ಯಾಯಾಲಯದ‌ ಮೊರೆ ಹೋಗಿದ್ದೇನೆ.‌ ನ್ಯಾಯ‌ ಸಿಗುವ ವಿಶ್ವಾಸವಿದೆ.‌ ನನ್ನನ್ನು ಗಡಿಪಾರು ಮಾಡಿಸಿದ್ದು ಷಡ್ಯಂತ್ರ್ಯವಲ್ಲದೇ ಬೇರೇನೂ ಅಲ್ಲ. ಇದು ಖಂಡನೀಯ‌ ಎಂದು ಟೀಕಿಸಿದ್ದಾರೆ.

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

2 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

14 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

14 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

15 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

20 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago