ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್ ಗಂಭೀರ ಆರೋಪ ಮಾಡಿದ್ದಾರೆ.
ಅವರು ನಗರದ ಕೆಆರ್ಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚದ ಕುರಿತಂತೆ ಕೇಳಿದರೆ ಇಂತಿಂತ ಅಧಿಕಾರಿಗಳಿಗೆ ಇಷ್ಟಿಷ್ಟು ನೀಡಬೇಕೆಂದು ಬಹಿರಂಗವಾಗಿ ಹೇಳುತ್ತಿತ್ತಾರೆ. ಇದೇ ಸಮಸ್ಯೆ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮುಂದುವರಿದಿದೆ. ಲಂಚಾವತಾರ ತಪ್ಪಿಸಲು ಕಂದಾಯ ಅದಾಲತ್ ಮೂಲಕ ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ಹೇರಲಾಗುವುದು. ಆ ಮೂಲಕ ಸಾರ್ವಜನಿಕರ ಸಹಕಾರದಿಂದ ಆಡಳಿತವನ್ನು ಜನರ ಬಾಗಿಲಿಗೆ ಮುಟ್ಟಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದರು, ಬಾಡಿಗೆಗೆ ನೀಡುತ್ತಿಲ್ಲ ಈ ಹಿನ್ನೆಲೆ, ತಳ್ಳುವ ಗಾಡಿಯ ಮೂಲಕ ವ್ಯಾಪಾರ ಮಾಡಬೇಕಾದ ಅನಿವಾರ್ಯತೆಗೆ ವ್ಯಾಪಾರಿಗಳು ಸಿಲುಕಿದ್ದಾರೆ. ನಾಗರಕೆರೆ ಸೇರಿದಂತೆ ನಗರಸಭೆಗೆ ಸೇರಿದ ಅನೇಕ ಬೆಲೆಬಾಳುವ ಆಸ್ತಿ ಒತ್ತುವರಿಯಾಗಿದೆ.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೆಸರಿಗೆ ಚೆನ್ನಾಗಿರುವುದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಉಪಯೋಗವಾಗಿಲ್ಲ. ತಾಲೂಕಿನಲ್ಲಿ ಕಂಡು ಬಂದಿರುವ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವಘಟಕದ ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಹೆಚ್.ಎನ್.ವೇಣು, ನಗರ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ಚಾಲಕರ ಸಂಘದ ಅಧ್ಯಕ್ಷ ವಿಜಯ್, ಉಪಾಧ್ಯಕ್ಷ ಗೋವಿಂದರಾಜು ಇದ್ದರು.
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…