ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್ ಗಂಭೀರ ಆರೋಪ ಮಾಡಿದ್ದಾರೆ.
ಅವರು ನಗರದ ಕೆಆರ್ಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚದ ಕುರಿತಂತೆ ಕೇಳಿದರೆ ಇಂತಿಂತ ಅಧಿಕಾರಿಗಳಿಗೆ ಇಷ್ಟಿಷ್ಟು ನೀಡಬೇಕೆಂದು ಬಹಿರಂಗವಾಗಿ ಹೇಳುತ್ತಿತ್ತಾರೆ. ಇದೇ ಸಮಸ್ಯೆ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮುಂದುವರಿದಿದೆ. ಲಂಚಾವತಾರ ತಪ್ಪಿಸಲು ಕಂದಾಯ ಅದಾಲತ್ ಮೂಲಕ ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ಹೇರಲಾಗುವುದು. ಆ ಮೂಲಕ ಸಾರ್ವಜನಿಕರ ಸಹಕಾರದಿಂದ ಆಡಳಿತವನ್ನು ಜನರ ಬಾಗಿಲಿಗೆ ಮುಟ್ಟಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದರು, ಬಾಡಿಗೆಗೆ ನೀಡುತ್ತಿಲ್ಲ ಈ ಹಿನ್ನೆಲೆ, ತಳ್ಳುವ ಗಾಡಿಯ ಮೂಲಕ ವ್ಯಾಪಾರ ಮಾಡಬೇಕಾದ ಅನಿವಾರ್ಯತೆಗೆ ವ್ಯಾಪಾರಿಗಳು ಸಿಲುಕಿದ್ದಾರೆ. ನಾಗರಕೆರೆ ಸೇರಿದಂತೆ ನಗರಸಭೆಗೆ ಸೇರಿದ ಅನೇಕ ಬೆಲೆಬಾಳುವ ಆಸ್ತಿ ಒತ್ತುವರಿಯಾಗಿದೆ.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೆಸರಿಗೆ ಚೆನ್ನಾಗಿರುವುದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಉಪಯೋಗವಾಗಿಲ್ಲ. ತಾಲೂಕಿನಲ್ಲಿ ಕಂಡು ಬಂದಿರುವ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವಘಟಕದ ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಹೆಚ್.ಎನ್.ವೇಣು, ನಗರ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ಚಾಲಕರ ಸಂಘದ ಅಧ್ಯಕ್ಷ ವಿಜಯ್, ಉಪಾಧ್ಯಕ್ಷ ಗೋವಿಂದರಾಜು ಇದ್ದರು.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…