ನಗರಸಭೆಯಲ್ಲಿ ಇ-ಖಾತೆ ಮಾಡಲು 15 ರಿಂದ 20 ಸಾವಿರ ರೂ ಲಂಚದ ಬೇಡಿಕೆ – KRS ಪಾರ್ಟಿ ಗಂಭೀರ ಆರೋಪ

ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್ ಗಂಭೀರ ಆರೋಪ ಮಾಡಿದ್ದಾರೆ.

ಅವರು ನಗರದ ಕೆಆರ್‌ಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚದ ಕುರಿತಂತೆ ಕೇಳಿದರೆ ಇಂತಿಂತ ಅಧಿಕಾರಿಗಳಿಗೆ ಇಷ್ಟಿಷ್ಟು ನೀಡಬೇಕೆಂದು ಬಹಿರಂಗವಾಗಿ ಹೇಳುತ್ತಿತ್ತಾರೆ. ಇದೇ ಸಮಸ್ಯೆ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮುಂದುವರಿದಿದೆ. ಲಂಚಾವತಾರ ತಪ್ಪಿಸಲು ಕಂದಾಯ ಅದಾಲತ್ ಮೂಲಕ ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ಹೇರಲಾಗುವುದು. ಆ ಮೂಲಕ ಸಾರ್ವಜನಿಕರ ಸಹಕಾರದಿಂದ ಆಡಳಿತವನ್ನು ಜನರ ಬಾಗಿಲಿಗೆ ಮುಟ್ಟಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.

ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದರು, ಬಾಡಿಗೆಗೆ ನೀಡುತ್ತಿಲ್ಲ ಈ‌ ಹಿನ್ನೆಲೆ, ತಳ್ಳುವ ಗಾಡಿಯ ಮೂಲಕ ವ್ಯಾಪಾರ ಮಾಡಬೇಕಾದ ಅನಿವಾರ್ಯತೆಗೆ ವ್ಯಾಪಾರಿಗಳು ಸಿಲುಕಿದ್ದಾರೆ. ನಾಗರಕೆರೆ ಸೇರಿದಂತೆ ನಗರಸಭೆಗೆ ಸೇರಿದ ಅನೇಕ ಬೆಲೆಬಾಳುವ ಆಸ್ತಿ ಒತ್ತುವರಿಯಾಗಿದೆ.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೆಸರಿಗೆ ಚೆನ್ನಾಗಿರುವುದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಉಪಯೋಗವಾಗಿಲ್ಲ. ತಾಲೂಕಿನಲ್ಲಿ ಕಂಡು ಬಂದಿರುವ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವಘಟಕದ ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಹೆಚ್.ಎನ್.ವೇಣು, ನಗರ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ಚಾಲಕರ ಸಂಘದ ಅಧ್ಯಕ್ಷ ವಿಜಯ್, ಉಪಾಧ್ಯಕ್ಷ ಗೋವಿಂದರಾಜು ಇದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

47 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago