ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್ ಗಂಭೀರ ಆರೋಪ ಮಾಡಿದ್ದಾರೆ.
ಅವರು ನಗರದ ಕೆಆರ್ಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚದ ಕುರಿತಂತೆ ಕೇಳಿದರೆ ಇಂತಿಂತ ಅಧಿಕಾರಿಗಳಿಗೆ ಇಷ್ಟಿಷ್ಟು ನೀಡಬೇಕೆಂದು ಬಹಿರಂಗವಾಗಿ ಹೇಳುತ್ತಿತ್ತಾರೆ. ಇದೇ ಸಮಸ್ಯೆ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮುಂದುವರಿದಿದೆ. ಲಂಚಾವತಾರ ತಪ್ಪಿಸಲು ಕಂದಾಯ ಅದಾಲತ್ ಮೂಲಕ ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ಹೇರಲಾಗುವುದು. ಆ ಮೂಲಕ ಸಾರ್ವಜನಿಕರ ಸಹಕಾರದಿಂದ ಆಡಳಿತವನ್ನು ಜನರ ಬಾಗಿಲಿಗೆ ಮುಟ್ಟಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದರು, ಬಾಡಿಗೆಗೆ ನೀಡುತ್ತಿಲ್ಲ ಈ ಹಿನ್ನೆಲೆ, ತಳ್ಳುವ ಗಾಡಿಯ ಮೂಲಕ ವ್ಯಾಪಾರ ಮಾಡಬೇಕಾದ ಅನಿವಾರ್ಯತೆಗೆ ವ್ಯಾಪಾರಿಗಳು ಸಿಲುಕಿದ್ದಾರೆ. ನಾಗರಕೆರೆ ಸೇರಿದಂತೆ ನಗರಸಭೆಗೆ ಸೇರಿದ ಅನೇಕ ಬೆಲೆಬಾಳುವ ಆಸ್ತಿ ಒತ್ತುವರಿಯಾಗಿದೆ.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೆಸರಿಗೆ ಚೆನ್ನಾಗಿರುವುದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಉಪಯೋಗವಾಗಿಲ್ಲ. ತಾಲೂಕಿನಲ್ಲಿ ಕಂಡು ಬಂದಿರುವ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವಘಟಕದ ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಹೆಚ್.ಎನ್.ವೇಣು, ನಗರ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ಚಾಲಕರ ಸಂಘದ ಅಧ್ಯಕ್ಷ ವಿಜಯ್, ಉಪಾಧ್ಯಕ್ಷ ಗೋವಿಂದರಾಜು ಇದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…