ನಗರಸಭೆಯಲ್ಲಿ ಇ-ಖಾತೆ ಮಾಡಲು 15 ರಿಂದ 20 ಸಾವಿರ ರೂ ಲಂಚದ ಬೇಡಿಕೆ – KRS ಪಾರ್ಟಿ ಗಂಭೀರ ಆರೋಪ

ನಗರಸಭೆ ವ್ಯಾಪ್ತಿಯಲ್ಲಿ ಇ-ಖಾತೆ ಮಾಡಲು ಅಧಿಕಾರಿಗಳು 15 ರಿಂದ 20 ಸಾವಿರ ರೂ ಲಂಚ ಬೇಡಿಕೆಯನ್ನು ಒಡ್ಡುತ್ತಿದ್ದಾರೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪರಾಜಿತ ಅಭ್ಯರ್ಥಿ ಬಿ.ಶಿವಶಂಕರ್ ಗಂಭೀರ ಆರೋಪ ಮಾಡಿದ್ದಾರೆ.

ಅವರು ನಗರದ ಕೆಆರ್‌ಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚದ ಕುರಿತಂತೆ ಕೇಳಿದರೆ ಇಂತಿಂತ ಅಧಿಕಾರಿಗಳಿಗೆ ಇಷ್ಟಿಷ್ಟು ನೀಡಬೇಕೆಂದು ಬಹಿರಂಗವಾಗಿ ಹೇಳುತ್ತಿತ್ತಾರೆ. ಇದೇ ಸಮಸ್ಯೆ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮುಂದುವರಿದಿದೆ. ಲಂಚಾವತಾರ ತಪ್ಪಿಸಲು ಕಂದಾಯ ಅದಾಲತ್ ಮೂಲಕ ಸಾರ್ವಜನಿಕರಿಗೆ ಇ-ಖಾತೆ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ಹೇರಲಾಗುವುದು. ಆ ಮೂಲಕ ಸಾರ್ವಜನಿಕರ ಸಹಕಾರದಿಂದ ಆಡಳಿತವನ್ನು ಜನರ ಬಾಗಿಲಿಗೆ ಮುಟ್ಟಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.

ನಗರಸಭೆ ವತಿಯಿಂದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದರು, ಬಾಡಿಗೆಗೆ ನೀಡುತ್ತಿಲ್ಲ ಈ‌ ಹಿನ್ನೆಲೆ, ತಳ್ಳುವ ಗಾಡಿಯ ಮೂಲಕ ವ್ಯಾಪಾರ ಮಾಡಬೇಕಾದ ಅನಿವಾರ್ಯತೆಗೆ ವ್ಯಾಪಾರಿಗಳು ಸಿಲುಕಿದ್ದಾರೆ. ನಾಗರಕೆರೆ ಸೇರಿದಂತೆ ನಗರಸಭೆಗೆ ಸೇರಿದ ಅನೇಕ ಬೆಲೆಬಾಳುವ ಆಸ್ತಿ ಒತ್ತುವರಿಯಾಗಿದೆ.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೆಸರಿಗೆ ಚೆನ್ನಾಗಿರುವುದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಉಪಯೋಗವಾಗಿಲ್ಲ. ತಾಲೂಕಿನಲ್ಲಿ ಕಂಡು ಬಂದಿರುವ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದು, ಅಧಿಕಾರಿಗಳು ಸ್ಪಂದಿಸದೇ ಹೋದಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವಘಟಕದ ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಹೆಚ್.ಎನ್.ವೇಣು, ನಗರ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ವೆಂಕಟೇಶ್, ಚಾಲಕರ ಸಂಘದ ಅಧ್ಯಕ್ಷ ವಿಜಯ್, ಉಪಾಧ್ಯಕ್ಷ ಗೋವಿಂದರಾಜು ಇದ್ದರು.

Ramesh Babu

Journalist

Recent Posts

ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಖಾಕಿ ದಾಳಿ: 45ಕ್ಕೂ ಹೆಚ್ಚು ಕಡೆ ತಪಾಸಣೆ

ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ರೌಡಿ ಶೀಟರ್‌ಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿ…

3 hours ago

ಯೋಗ ಮತ್ತು ಧ್ಯಾನದ ಪರಿಕಲ್ಪನೆ ಸುತ್ತ ಒಂದಷ್ಟು ಅನಿಸಿಕೆಗಳು……..

ಧ್ಯಾನಸ್ಥ ಮನಸ್ಥಿತಿ,.... ಸಾಧಿಸುವ ಸರಳ ವಿಧಾನಗಳು, ಯೋಗ ಮತ್ತು ಧ್ಯಾನ, ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ…

7 hours ago

ಒಂಟಿ ವೃದ್ಧೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ

ಗೌರಿಬಿದನೂರು: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಚಿನ್ನದ ಓಲೆಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಮಂಚೇನಹಳ್ಳಿ ಪೊಲೀಸರು…

21 hours ago

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

2 days ago

ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…

2 days ago