ನಗರಸಭೆಯಲ್ಲಿ ಸಂಕ್ರಾತಿ ಸಂಭ್ರಮ: ನಗರಸಭೆ ಅಧ್ಯಕ್ಷರು‌‌ ಸೇರಿದಂತೆ ಎಲ್ಲಾ ಸದಸ್ಯರು ಸಂಕ್ರಾಂತಿ ಸಂಭ್ರಮದಲ್ಲಿ‌ ಭಾಗಿ: ಎಳ್ಳು – ಬೆಲ್ಲ ಹಂಚಿ ಪರಸ್ಪರ ಶುಭ ಕೋರಿದರು

ಮಕರ ಸಂಕ್ರಾಂತಿ ಹಬ್ಬ ಹಿಂದೂಗಳಿಗೆ ಹೆಚ್ಚು ವಿಶೇಷ. ಎಳ್ಳು – ಬೆಲ್ಲ ಹಂಚಿ ಪರಸ್ಪರ ಶುಭವನ್ನು ಹಾರೈಸುವ ಹಬ್ಬ ಇದಾಗಿದೆ. ಈ ದಿನದಿಂದ ಸೂರ್ಯ ದೇವನು ಉತ್ತರಾಯಣದತ್ತ ಸಂಚಾರವನ್ನು ಪ್ರಾರಂಭಿಸುತ್ತಾನೆ. ಭಾರತ ದೇಶದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬಗಳಿಗೂ ಕೂಡ ತನ್ನದೇ ಆದ ಮಹತ್ವವಿದೆ. ರೈತಾಪಿ ಜನರು ಪ್ರತಿವರ್ಷ ಆಚರಿಸುವ ಹಬ್ಬಗಳಲ್ಲಿ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ ಹಬ್ಬವಾಗಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಕೂಡ ರೈತರು ಸುಗ್ಗಿ ಹಬ್ಬವಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ.

ಈ ಹಿನ್ನೆಲೆ ಇಂದು ಒಂದು ದಿನ ಮುಂಚೆಯೇ ನಗರಸಭೆ ವತಿಯಿಂದ ನಗರಸಭೆ ಆವರಣದಲ್ಲಿ ಸಂಕ್ರಾಂತಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷರು, ಸೇರಿದಂತೆ ಎಲ್ಲಾ ಸದಸ್ಯರು, ಅಧಿಕಾರಿ ವರ್ಗ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಸಂತೋಷದಿಂದ ಹಬ್ಬ ಆಚರಣೆ ಮಾಡಿದರು.

ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಯಿತು. ನಂತರ ಗೋಪೂಜೆ ಮಾಡಲಾಯಿತು. ನಂತರ ಎಳ್ಳು – ಬೆಲ್ಲ ಹಂಚಿ ಪರಸ್ಪರ ಹಬ್ಬದ ಶುಭವನ್ನು ಕೋರಲಾಯಿತು.

Ramesh Babu

Journalist

Recent Posts

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

30 minutes ago

ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

16 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…

18 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

18 hours ago