Categories: ಕೋಲಾರ

ನಗರಸಭೆಯ ಅಭಿವೃದ್ಧಿಗೆ ಮಾಹಿತಿ ಕೊಡಿ, ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಹಾಗೂ ಕಾಮಗಾರಿ ಬಗ್ಗೆ ಮಾಹಿತಿ ಕೊಡಿ ನಗರಸಭೆ ಕಮಿಷನರ್ ಕೈಯಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ನಗರಸಭೆ ಸದಸ್ಯರಿಗೆ ಹೇಳಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರದೇ ಇಲಾಖೆ. ನಗರಸಭೆ ರಾಜ್ಯ ಸರಕಾರವು ಈಗಾಗಲೇ ಅನುದಾನವು ಬಿಡುಗಡೆ ಮಾಡಿದೆ. ಇನ್ನೂ ಬೇಕಾದರೂ ಹಣ ಕೊಡಲು ಸರಕಾರ ಸಿದ್ದವಿದೆ. ನಿಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಯಾವ ಕೆಲಸಗಳು ಆಗಬೇಕಾಗಿದೆ ಎಲ್ಲಿ ಆಗಬೇಕು ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಕೆಲಸವನ್ನು ಮಾಡಿಸುತ್ತೇವೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳ ಟಾಸ್ಕ್ ಫೋರ್ಸ್ ಲ್ಲಿ ಅನುದಾನ ಇದೆ. ನಗರಸಭೆ ಜನರ ಆಸ್ತಿಯಾಗಿದೆ ಜನ ದಿನನಿತ್ಯ ನಗರಸಭೆಗೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬರುತ್ತಾರೆ. ಅವರಿಗೆ ಪರಿಹಾರ ನೀಡುವುದು ಕೂಡ ಅಧಿಕಾರಿಗಳ ಜವಾಬ್ದಾರಿ. ನಗರಸಭೆಯಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಒಂದೊಂದಾಗಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಮಾತನಾಡಿ, ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ ಸರಿಯಾದ ಮಾಹಿತಿ ಕೊಡಲ್ಲ ದಳ್ಳಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ. ಇವತ್ತು 35 ಜನ ನಗರಸಭೆ ಸದಸ್ಯರು ಇದ್ದಾರೆ ನೇರವಾಗಿ ಹೇಳಲಿ ಸದಸ್ಯರ ಮೇಲೆ ಗೂಬೆ ಕೂರಿಸುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಾ ಇಲ್ಲ. ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನರು ನಮ್ಮನ್ನು ಕೆಟ್ಟದಾಗಿ ಬೈಕೊಂಡು ಹೋಗತ್ತಾರೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಶಾಸಕ ಕೊತ್ತೂರು ಮಂಜುನಾಥ್, ನಗರಸಭೆ ಸದಸ್ಯರನ್ನು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬುದನ್ನು ಬಿಟ್ಟು ಅವರು ಕೇಳಿದಾಗ ಸ್ಪಂದಿಸುವುದು ಅಧಿಕಾರಿ ವರ್ಗದವರ ಜವಾಬ್ದಾರಿ ಹಿಂದೆ ಏನು ಆಗಿದೆ ಅದನ್ನು ಬಿಟ್ಟು ಬಿಡೋಣ ಮುಂದೆ ಆಗದಂತೆ ಎಚ್ಚರಿಕೆ ವಹಿಸೋಣ ನಗರಸಭೆಯನ್ನು ಮಂದೆ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಸರಕಾರ ಕಾರ್ಯ ಯೋಜನೆ ರೂಪಿಸಲಾಗುತ್ತಾ ಇದೆ. ನೂತನ ಕಟ್ಟಡವನ್ನು ಪಾಲಿಕೆಗೆ ಪೂರಕವಾಗಿ ಆದಷ್ಟು ಬೇಗ ನಿರ್ಮಿಸಲಾಗುತ್ತದೆ. ನಿಮ್ಮಲ್ಲಿ ನಾಲ್ಕು ಜನರ ತಂಡ ಮಾಡಿ ಕಟ್ಟಡದ ಪ್ರತಿಯೊಂದು ಹಂತದಲ್ಲಿ ಪರಿಶೀಲನೆ ಮಾಡಿಸಲಾಗುತ್ತದೆ. ಕಟ್ಟಡವು ಗುಣಮಟ್ಟದೊಂದಿಗೆ ಮಾದರಿ ಕಟ್ಟಡ ನಿರ್ಮಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಭೆ ಇದೆ ಎಂದು ಗೊತ್ತಿದ್ದರೂ ನಗರಸಭೆ ವ್ಯಾಪ್ತಿಯ ಕೆಲವು ಗುತ್ತಿಗೆದಾರರು ಸಭೆಗೆ ಬಂದಿಲ್ಲ ಎಂದು ಆಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆಯುಕ್ತರು ತಮ್ಮ ವ್ಯಾಪ್ತಿಯ ಗುತ್ತಿಗೆದಾರರನ್ನು ಕರೆಸಿ ಸಭೆ ಮಾಡಿ ಅವರಿಗೆ ಕಾಮಗಾರಿಗಳ ಬಗ್ಗೆ ಗಡುವು ನೀಡಬೇಕು ಇಂತಿಷ್ಟು ದಿನಗಳಲ್ಲಿ ಮುಗಿಸಬೇಕು ಎಂದು ಹೇಳಿ ಜೊತೆಗೆ ನಗರಸಭೆಯಲ್ಲಿನ ದಳ್ಳಾಳಿಗಳನ್ನು ದೂರವಿಟ್ಟರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ನಗರಸಭೆಗೆ ಸಂಬಂಧಿಸಿದ ಯಾವುದೇ ಫೈಲ್‌ಗಳು ಬಂದರೂ ಕೂಡಲೇ ಪರಿಹಾರ ಮಾಡಿ ಕಳುಹಿಸಲಾಗುತ್ತಿದೆ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹಾರ ಮಾಡಲು ಕಚೇರಿಯ ಸಿಬ್ಬಂದಿ ಕೂಡ ಸಿದ್ದರಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಾ ಇದೆ ನೀರಿಗೆ ಸಮಸ್ಯೆಯಾಗಬಾರದು ಕಸದ ನಿರ್ವಹಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ತಹಶಿಲ್ದಾರ್ ಹರ್ಷವರ್ಧನ್, ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

2 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

5 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

17 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

19 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

19 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago