Categories: ಕೋಲಾರ

ನಗರಸಭೆಯ ಅಭಿವೃದ್ಧಿಗೆ ಮಾಹಿತಿ ಕೊಡಿ, ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಹಾಗೂ ಕಾಮಗಾರಿ ಬಗ್ಗೆ ಮಾಹಿತಿ ಕೊಡಿ ನಗರಸಭೆ ಕಮಿಷನರ್ ಕೈಯಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ನಗರಸಭೆ ಸದಸ್ಯರಿಗೆ ಹೇಳಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರದೇ ಇಲಾಖೆ. ನಗರಸಭೆ ರಾಜ್ಯ ಸರಕಾರವು ಈಗಾಗಲೇ ಅನುದಾನವು ಬಿಡುಗಡೆ ಮಾಡಿದೆ. ಇನ್ನೂ ಬೇಕಾದರೂ ಹಣ ಕೊಡಲು ಸರಕಾರ ಸಿದ್ದವಿದೆ. ನಿಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಯಾವ ಕೆಲಸಗಳು ಆಗಬೇಕಾಗಿದೆ ಎಲ್ಲಿ ಆಗಬೇಕು ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಕೆಲಸವನ್ನು ಮಾಡಿಸುತ್ತೇವೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳ ಟಾಸ್ಕ್ ಫೋರ್ಸ್ ಲ್ಲಿ ಅನುದಾನ ಇದೆ. ನಗರಸಭೆ ಜನರ ಆಸ್ತಿಯಾಗಿದೆ ಜನ ದಿನನಿತ್ಯ ನಗರಸಭೆಗೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬರುತ್ತಾರೆ. ಅವರಿಗೆ ಪರಿಹಾರ ನೀಡುವುದು ಕೂಡ ಅಧಿಕಾರಿಗಳ ಜವಾಬ್ದಾರಿ. ನಗರಸಭೆಯಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಒಂದೊಂದಾಗಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಮಾತನಾಡಿ, ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ ಸರಿಯಾದ ಮಾಹಿತಿ ಕೊಡಲ್ಲ ದಳ್ಳಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ. ಇವತ್ತು 35 ಜನ ನಗರಸಭೆ ಸದಸ್ಯರು ಇದ್ದಾರೆ ನೇರವಾಗಿ ಹೇಳಲಿ ಸದಸ್ಯರ ಮೇಲೆ ಗೂಬೆ ಕೂರಿಸುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಾ ಇಲ್ಲ. ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನರು ನಮ್ಮನ್ನು ಕೆಟ್ಟದಾಗಿ ಬೈಕೊಂಡು ಹೋಗತ್ತಾರೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಶಾಸಕ ಕೊತ್ತೂರು ಮಂಜುನಾಥ್, ನಗರಸಭೆ ಸದಸ್ಯರನ್ನು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬುದನ್ನು ಬಿಟ್ಟು ಅವರು ಕೇಳಿದಾಗ ಸ್ಪಂದಿಸುವುದು ಅಧಿಕಾರಿ ವರ್ಗದವರ ಜವಾಬ್ದಾರಿ ಹಿಂದೆ ಏನು ಆಗಿದೆ ಅದನ್ನು ಬಿಟ್ಟು ಬಿಡೋಣ ಮುಂದೆ ಆಗದಂತೆ ಎಚ್ಚರಿಕೆ ವಹಿಸೋಣ ನಗರಸಭೆಯನ್ನು ಮಂದೆ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಸರಕಾರ ಕಾರ್ಯ ಯೋಜನೆ ರೂಪಿಸಲಾಗುತ್ತಾ ಇದೆ. ನೂತನ ಕಟ್ಟಡವನ್ನು ಪಾಲಿಕೆಗೆ ಪೂರಕವಾಗಿ ಆದಷ್ಟು ಬೇಗ ನಿರ್ಮಿಸಲಾಗುತ್ತದೆ. ನಿಮ್ಮಲ್ಲಿ ನಾಲ್ಕು ಜನರ ತಂಡ ಮಾಡಿ ಕಟ್ಟಡದ ಪ್ರತಿಯೊಂದು ಹಂತದಲ್ಲಿ ಪರಿಶೀಲನೆ ಮಾಡಿಸಲಾಗುತ್ತದೆ. ಕಟ್ಟಡವು ಗುಣಮಟ್ಟದೊಂದಿಗೆ ಮಾದರಿ ಕಟ್ಟಡ ನಿರ್ಮಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಭೆ ಇದೆ ಎಂದು ಗೊತ್ತಿದ್ದರೂ ನಗರಸಭೆ ವ್ಯಾಪ್ತಿಯ ಕೆಲವು ಗುತ್ತಿಗೆದಾರರು ಸಭೆಗೆ ಬಂದಿಲ್ಲ ಎಂದು ಆಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆಯುಕ್ತರು ತಮ್ಮ ವ್ಯಾಪ್ತಿಯ ಗುತ್ತಿಗೆದಾರರನ್ನು ಕರೆಸಿ ಸಭೆ ಮಾಡಿ ಅವರಿಗೆ ಕಾಮಗಾರಿಗಳ ಬಗ್ಗೆ ಗಡುವು ನೀಡಬೇಕು ಇಂತಿಷ್ಟು ದಿನಗಳಲ್ಲಿ ಮುಗಿಸಬೇಕು ಎಂದು ಹೇಳಿ ಜೊತೆಗೆ ನಗರಸಭೆಯಲ್ಲಿನ ದಳ್ಳಾಳಿಗಳನ್ನು ದೂರವಿಟ್ಟರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ನಗರಸಭೆಗೆ ಸಂಬಂಧಿಸಿದ ಯಾವುದೇ ಫೈಲ್‌ಗಳು ಬಂದರೂ ಕೂಡಲೇ ಪರಿಹಾರ ಮಾಡಿ ಕಳುಹಿಸಲಾಗುತ್ತಿದೆ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹಾರ ಮಾಡಲು ಕಚೇರಿಯ ಸಿಬ್ಬಂದಿ ಕೂಡ ಸಿದ್ದರಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಾ ಇದೆ ನೀರಿಗೆ ಸಮಸ್ಯೆಯಾಗಬಾರದು ಕಸದ ನಿರ್ವಹಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ತಹಶಿಲ್ದಾರ್ ಹರ್ಷವರ್ಧನ್, ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

32 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago