Categories: ಕೋಲಾರ

ನಗರಸಭೆಯ ಅಭಿವೃದ್ಧಿಗೆ ಮಾಹಿತಿ ಕೊಡಿ, ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಹಾಗೂ ಕಾಮಗಾರಿ ಬಗ್ಗೆ ಮಾಹಿತಿ ಕೊಡಿ ನಗರಸಭೆ ಕಮಿಷನರ್ ಕೈಯಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ನಗರಸಭೆ ಸದಸ್ಯರಿಗೆ ಹೇಳಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರದೇ ಇಲಾಖೆ. ನಗರಸಭೆ ರಾಜ್ಯ ಸರಕಾರವು ಈಗಾಗಲೇ ಅನುದಾನವು ಬಿಡುಗಡೆ ಮಾಡಿದೆ. ಇನ್ನೂ ಬೇಕಾದರೂ ಹಣ ಕೊಡಲು ಸರಕಾರ ಸಿದ್ದವಿದೆ. ನಿಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಯಾವ ಕೆಲಸಗಳು ಆಗಬೇಕಾಗಿದೆ ಎಲ್ಲಿ ಆಗಬೇಕು ಎಂಬುದನ್ನು ಪಟ್ಟಿ ಮಾಡಿ ಕೂಡಲೇ ಕೆಲಸವನ್ನು ಮಾಡಿಸುತ್ತೇವೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳ ಟಾಸ್ಕ್ ಫೋರ್ಸ್ ಲ್ಲಿ ಅನುದಾನ ಇದೆ. ನಗರಸಭೆ ಜನರ ಆಸ್ತಿಯಾಗಿದೆ ಜನ ದಿನನಿತ್ಯ ನಗರಸಭೆಗೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಬರುತ್ತಾರೆ. ಅವರಿಗೆ ಪರಿಹಾರ ನೀಡುವುದು ಕೂಡ ಅಧಿಕಾರಿಗಳ ಜವಾಬ್ದಾರಿ. ನಗರಸಭೆಯಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಒಂದೊಂದಾಗಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಮಾತನಾಡಿ, ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ ಸರಿಯಾದ ಮಾಹಿತಿ ಕೊಡಲ್ಲ ದಳ್ಳಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ. ಇವತ್ತು 35 ಜನ ನಗರಸಭೆ ಸದಸ್ಯರು ಇದ್ದಾರೆ ನೇರವಾಗಿ ಹೇಳಲಿ ಸದಸ್ಯರ ಮೇಲೆ ಗೂಬೆ ಕೂರಿಸುತ್ತಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಾ ಇಲ್ಲ. ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನರು ನಮ್ಮನ್ನು ಕೆಟ್ಟದಾಗಿ ಬೈಕೊಂಡು ಹೋಗತ್ತಾರೆ ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಶಾಸಕ ಕೊತ್ತೂರು ಮಂಜುನಾಥ್, ನಗರಸಭೆ ಸದಸ್ಯರನ್ನು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎಂಬುದನ್ನು ಬಿಟ್ಟು ಅವರು ಕೇಳಿದಾಗ ಸ್ಪಂದಿಸುವುದು ಅಧಿಕಾರಿ ವರ್ಗದವರ ಜವಾಬ್ದಾರಿ ಹಿಂದೆ ಏನು ಆಗಿದೆ ಅದನ್ನು ಬಿಟ್ಟು ಬಿಡೋಣ ಮುಂದೆ ಆಗದಂತೆ ಎಚ್ಚರಿಕೆ ವಹಿಸೋಣ ನಗರಸಭೆಯನ್ನು ಮಂದೆ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಸರಕಾರ ಕಾರ್ಯ ಯೋಜನೆ ರೂಪಿಸಲಾಗುತ್ತಾ ಇದೆ. ನೂತನ ಕಟ್ಟಡವನ್ನು ಪಾಲಿಕೆಗೆ ಪೂರಕವಾಗಿ ಆದಷ್ಟು ಬೇಗ ನಿರ್ಮಿಸಲಾಗುತ್ತದೆ. ನಿಮ್ಮಲ್ಲಿ ನಾಲ್ಕು ಜನರ ತಂಡ ಮಾಡಿ ಕಟ್ಟಡದ ಪ್ರತಿಯೊಂದು ಹಂತದಲ್ಲಿ ಪರಿಶೀಲನೆ ಮಾಡಿಸಲಾಗುತ್ತದೆ. ಕಟ್ಟಡವು ಗುಣಮಟ್ಟದೊಂದಿಗೆ ಮಾದರಿ ಕಟ್ಟಡ ನಿರ್ಮಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಭೆ ಇದೆ ಎಂದು ಗೊತ್ತಿದ್ದರೂ ನಗರಸಭೆ ವ್ಯಾಪ್ತಿಯ ಕೆಲವು ಗುತ್ತಿಗೆದಾರರು ಸಭೆಗೆ ಬಂದಿಲ್ಲ ಎಂದು ಆಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆಯುಕ್ತರು ತಮ್ಮ ವ್ಯಾಪ್ತಿಯ ಗುತ್ತಿಗೆದಾರರನ್ನು ಕರೆಸಿ ಸಭೆ ಮಾಡಿ ಅವರಿಗೆ ಕಾಮಗಾರಿಗಳ ಬಗ್ಗೆ ಗಡುವು ನೀಡಬೇಕು ಇಂತಿಷ್ಟು ದಿನಗಳಲ್ಲಿ ಮುಗಿಸಬೇಕು ಎಂದು ಹೇಳಿ ಜೊತೆಗೆ ನಗರಸಭೆಯಲ್ಲಿನ ದಳ್ಳಾಳಿಗಳನ್ನು ದೂರವಿಟ್ಟರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ನಗರಸಭೆಗೆ ಸಂಬಂಧಿಸಿದ ಯಾವುದೇ ಫೈಲ್‌ಗಳು ಬಂದರೂ ಕೂಡಲೇ ಪರಿಹಾರ ಮಾಡಿ ಕಳುಹಿಸಲಾಗುತ್ತಿದೆ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹಾರ ಮಾಡಲು ಕಚೇರಿಯ ಸಿಬ್ಬಂದಿ ಕೂಡ ಸಿದ್ದರಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಾ ಇದೆ ನೀರಿಗೆ ಸಮಸ್ಯೆಯಾಗಬಾರದು ಕಸದ ನಿರ್ವಹಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು

ಸಭೆಯಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ತಹಶಿಲ್ದಾರ್ ಹರ್ಷವರ್ಧನ್, ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago