ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕ ಧೀರಜ್ ಮುನಿರಾಜ್ ವಿಧಾನಸಭೆಯಲ್ಲಿ ಚರ್ಚೆ

ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು.

ಚಿಕ್ಕತುಮಕೂರು ಕೆರೆಯ 37 ಎಕರೆ ವಿಸ್ತೀರ್ಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ(STP) ಇದ್ದು, ಸದ್ಯ ದೊಡ್ಡಬಳ್ಳಾಪುರ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ(STP)ದಲ್ಲಿ ಯಾವುದೇ ರೀತಿಯ ಶುದ್ಧೀಕರಣ ಕೆಲಸ ಆಗುತ್ತಿಲ್ಲ, ಕೆರೆಯ ಒಡಲಿಗೆ ನೇರವಾಗಿ ತ್ಯಾಜ್ಯ ಸೇರಿದ ಪರಿಣಾಮ ಎರಡು ಗ್ರಾಮ ಪಂಚಾಯಿತಿಗಳ 17 ಗ್ರಾಮಗಳಲ್ಲಿನ ಅಂತರ್ಜಲ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ, ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವಿಧಾನಸಭೆ ಮತ್ತು ಲೋಕಸಬಾ ಚುನಾವಣೆಯನ್ನ ಬಹಿಷ್ಕರಿಸಿದ್ದರು, ಅಧಿಕಾರಿಗಳು ಮನವೊಲೈಕೆಯ ನಂತರ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿದ್ದರು.

ಎರಡು ಗ್ರಾಮ ಪಂಚಾಯಿತಿಯ ಜನರು ಮೂರನೇ ಹಂತದ ನೀರು ಶುದ್ಧೀಕರಣ ಘಟಕಕ್ಕೆ ಬೇಡಿಕೆಯನ್ನ ಇಟ್ಟಿದ್ದರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎರಡನೇ ಹಂತದ ನೀರು ಶುದ್ಧೀಕರಣ ಘಟಕ ಸ್ಥಾಪಿಸುವ ಭರವಸೆಯನ್ನ ನೀಡಿದ್ದರು, ಅದರಂತೆ 130.50 ಕೋಟಿಯ ಕ್ರಿಯಾಯೋಜನೆ ತಯಾರಾಗಿದೆ. ಸದ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಚಿಕ್ಕತುಮಕೂರು ಕೆರೆಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ(STP) ಬಂದ್ ಮಾಡುವಂತೆ ಸೂಚನೆ ನೀಡಿದೆ, ನಾವು ಸಹ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸಲು ಮತ್ತು 130.50 ಕೋಟಿ ಲಕ್ಷದ ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಪ್ರಶ್ನೆ ಮಾಡಿದರು.

ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು 130.50 ಕೋಟಿ ಕ್ರಿಯಾಯೋಜನೆ ಟೆಂಡರ್ ನಮ್ಮ ಮುಂದೆ ಬದಿಲ್ಲ, ಆ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚಿಸಲಾಗವುದು, ಇದು ದೊಡ್ಡಮೊತ್ತದ ಯೋಜನೆಯಾಗಿದ್ದು, ಹಣಕಾಸಿನ ಲಭ್ಯತೆ ನೋಡಿ ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

6 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

8 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

9 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

10 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

13 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

18 hours ago