ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕ ಧೀರಜ್ ಮುನಿರಾಜ್ ವಿಧಾನಸಭೆಯಲ್ಲಿ ಚರ್ಚೆ

ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು.

ಚಿಕ್ಕತುಮಕೂರು ಕೆರೆಯ 37 ಎಕರೆ ವಿಸ್ತೀರ್ಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ(STP) ಇದ್ದು, ಸದ್ಯ ದೊಡ್ಡಬಳ್ಳಾಪುರ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ(STP)ದಲ್ಲಿ ಯಾವುದೇ ರೀತಿಯ ಶುದ್ಧೀಕರಣ ಕೆಲಸ ಆಗುತ್ತಿಲ್ಲ, ಕೆರೆಯ ಒಡಲಿಗೆ ನೇರವಾಗಿ ತ್ಯಾಜ್ಯ ಸೇರಿದ ಪರಿಣಾಮ ಎರಡು ಗ್ರಾಮ ಪಂಚಾಯಿತಿಗಳ 17 ಗ್ರಾಮಗಳಲ್ಲಿನ ಅಂತರ್ಜಲ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ, ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವಿಧಾನಸಭೆ ಮತ್ತು ಲೋಕಸಬಾ ಚುನಾವಣೆಯನ್ನ ಬಹಿಷ್ಕರಿಸಿದ್ದರು, ಅಧಿಕಾರಿಗಳು ಮನವೊಲೈಕೆಯ ನಂತರ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿದ್ದರು.

ಎರಡು ಗ್ರಾಮ ಪಂಚಾಯಿತಿಯ ಜನರು ಮೂರನೇ ಹಂತದ ನೀರು ಶುದ್ಧೀಕರಣ ಘಟಕಕ್ಕೆ ಬೇಡಿಕೆಯನ್ನ ಇಟ್ಟಿದ್ದರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎರಡನೇ ಹಂತದ ನೀರು ಶುದ್ಧೀಕರಣ ಘಟಕ ಸ್ಥಾಪಿಸುವ ಭರವಸೆಯನ್ನ ನೀಡಿದ್ದರು, ಅದರಂತೆ 130.50 ಕೋಟಿಯ ಕ್ರಿಯಾಯೋಜನೆ ತಯಾರಾಗಿದೆ. ಸದ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಚಿಕ್ಕತುಮಕೂರು ಕೆರೆಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ(STP) ಬಂದ್ ಮಾಡುವಂತೆ ಸೂಚನೆ ನೀಡಿದೆ, ನಾವು ಸಹ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸಲು ಮತ್ತು 130.50 ಕೋಟಿ ಲಕ್ಷದ ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಪ್ರಶ್ನೆ ಮಾಡಿದರು.

ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು 130.50 ಕೋಟಿ ಕ್ರಿಯಾಯೋಜನೆ ಟೆಂಡರ್ ನಮ್ಮ ಮುಂದೆ ಬದಿಲ್ಲ, ಆ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚಿಸಲಾಗವುದು, ಇದು ದೊಡ್ಡಮೊತ್ತದ ಯೋಜನೆಯಾಗಿದ್ದು, ಹಣಕಾಸಿನ ಲಭ್ಯತೆ ನೋಡಿ ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago