ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕ ಧೀರಜ್ ಮುನಿರಾಜ್ ವಿಧಾನಸಭೆಯಲ್ಲಿ ಚರ್ಚೆ

ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು.

ಚಿಕ್ಕತುಮಕೂರು ಕೆರೆಯ 37 ಎಕರೆ ವಿಸ್ತೀರ್ಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ(STP) ಇದ್ದು, ಸದ್ಯ ದೊಡ್ಡಬಳ್ಳಾಪುರ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ(STP)ದಲ್ಲಿ ಯಾವುದೇ ರೀತಿಯ ಶುದ್ಧೀಕರಣ ಕೆಲಸ ಆಗುತ್ತಿಲ್ಲ, ಕೆರೆಯ ಒಡಲಿಗೆ ನೇರವಾಗಿ ತ್ಯಾಜ್ಯ ಸೇರಿದ ಪರಿಣಾಮ ಎರಡು ಗ್ರಾಮ ಪಂಚಾಯಿತಿಗಳ 17 ಗ್ರಾಮಗಳಲ್ಲಿನ ಅಂತರ್ಜಲ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ, ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವಿಧಾನಸಭೆ ಮತ್ತು ಲೋಕಸಬಾ ಚುನಾವಣೆಯನ್ನ ಬಹಿಷ್ಕರಿಸಿದ್ದರು, ಅಧಿಕಾರಿಗಳು ಮನವೊಲೈಕೆಯ ನಂತರ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿದ್ದರು.

ಎರಡು ಗ್ರಾಮ ಪಂಚಾಯಿತಿಯ ಜನರು ಮೂರನೇ ಹಂತದ ನೀರು ಶುದ್ಧೀಕರಣ ಘಟಕಕ್ಕೆ ಬೇಡಿಕೆಯನ್ನ ಇಟ್ಟಿದ್ದರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎರಡನೇ ಹಂತದ ನೀರು ಶುದ್ಧೀಕರಣ ಘಟಕ ಸ್ಥಾಪಿಸುವ ಭರವಸೆಯನ್ನ ನೀಡಿದ್ದರು, ಅದರಂತೆ 130.50 ಕೋಟಿಯ ಕ್ರಿಯಾಯೋಜನೆ ತಯಾರಾಗಿದೆ. ಸದ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಚಿಕ್ಕತುಮಕೂರು ಕೆರೆಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ(STP) ಬಂದ್ ಮಾಡುವಂತೆ ಸೂಚನೆ ನೀಡಿದೆ, ನಾವು ಸಹ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸಲು ಮತ್ತು 130.50 ಕೋಟಿ ಲಕ್ಷದ ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಪ್ರಶ್ನೆ ಮಾಡಿದರು.

ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು 130.50 ಕೋಟಿ ಕ್ರಿಯಾಯೋಜನೆ ಟೆಂಡರ್ ನಮ್ಮ ಮುಂದೆ ಬದಿಲ್ಲ, ಆ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚಿಸಲಾಗವುದು, ಇದು ದೊಡ್ಡಮೊತ್ತದ ಯೋಜನೆಯಾಗಿದ್ದು, ಹಣಕಾಸಿನ ಲಭ್ಯತೆ ನೋಡಿ ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago