ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು.
ಚಿಕ್ಕತುಮಕೂರು ಕೆರೆಯ 37 ಎಕರೆ ವಿಸ್ತೀರ್ಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ(STP) ಇದ್ದು, ಸದ್ಯ ದೊಡ್ಡಬಳ್ಳಾಪುರ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ(STP)ದಲ್ಲಿ ಯಾವುದೇ ರೀತಿಯ ಶುದ್ಧೀಕರಣ ಕೆಲಸ ಆಗುತ್ತಿಲ್ಲ, ಕೆರೆಯ ಒಡಲಿಗೆ ನೇರವಾಗಿ ತ್ಯಾಜ್ಯ ಸೇರಿದ ಪರಿಣಾಮ ಎರಡು ಗ್ರಾಮ ಪಂಚಾಯಿತಿಗಳ 17 ಗ್ರಾಮಗಳಲ್ಲಿನ ಅಂತರ್ಜಲ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ, ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವಿಧಾನಸಭೆ ಮತ್ತು ಲೋಕಸಬಾ ಚುನಾವಣೆಯನ್ನ ಬಹಿಷ್ಕರಿಸಿದ್ದರು, ಅಧಿಕಾರಿಗಳು ಮನವೊಲೈಕೆಯ ನಂತರ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿದ್ದರು.
ಎರಡು ಗ್ರಾಮ ಪಂಚಾಯಿತಿಯ ಜನರು ಮೂರನೇ ಹಂತದ ನೀರು ಶುದ್ಧೀಕರಣ ಘಟಕಕ್ಕೆ ಬೇಡಿಕೆಯನ್ನ ಇಟ್ಟಿದ್ದರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎರಡನೇ ಹಂತದ ನೀರು ಶುದ್ಧೀಕರಣ ಘಟಕ ಸ್ಥಾಪಿಸುವ ಭರವಸೆಯನ್ನ ನೀಡಿದ್ದರು, ಅದರಂತೆ 130.50 ಕೋಟಿಯ ಕ್ರಿಯಾಯೋಜನೆ ತಯಾರಾಗಿದೆ. ಸದ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಚಿಕ್ಕತುಮಕೂರು ಕೆರೆಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ(STP) ಬಂದ್ ಮಾಡುವಂತೆ ಸೂಚನೆ ನೀಡಿದೆ, ನಾವು ಸಹ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದರು.
ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸಲು ಮತ್ತು 130.50 ಕೋಟಿ ಲಕ್ಷದ ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಪ್ರಶ್ನೆ ಮಾಡಿದರು.
ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು 130.50 ಕೋಟಿ ಕ್ರಿಯಾಯೋಜನೆ ಟೆಂಡರ್ ನಮ್ಮ ಮುಂದೆ ಬದಿಲ್ಲ, ಆ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚಿಸಲಾಗವುದು, ಇದು ದೊಡ್ಡಮೊತ್ತದ ಯೋಜನೆಯಾಗಿದ್ದು, ಹಣಕಾಸಿನ ಲಭ್ಯತೆ ನೋಡಿ ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…