ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕ ಧೀರಜ್ ಮುನಿರಾಜ್ ವಿಧಾನಸಭೆಯಲ್ಲಿ ಚರ್ಚೆ

ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು.

ಚಿಕ್ಕತುಮಕೂರು ಕೆರೆಯ 37 ಎಕರೆ ವಿಸ್ತೀರ್ಣದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ(STP) ಇದ್ದು, ಸದ್ಯ ದೊಡ್ಡಬಳ್ಳಾಪುರ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಮಾಡುತ್ತಿರುವ ಒಳಚರಂಡಿ ಸಂಸ್ಕರಣಾ ಘಟಕ(STP)ದಲ್ಲಿ ಯಾವುದೇ ರೀತಿಯ ಶುದ್ಧೀಕರಣ ಕೆಲಸ ಆಗುತ್ತಿಲ್ಲ, ಕೆರೆಯ ಒಡಲಿಗೆ ನೇರವಾಗಿ ತ್ಯಾಜ್ಯ ಸೇರಿದ ಪರಿಣಾಮ ಎರಡು ಗ್ರಾಮ ಪಂಚಾಯಿತಿಗಳ 17 ಗ್ರಾಮಗಳಲ್ಲಿನ ಅಂತರ್ಜಲ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ, ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವಿಧಾನಸಭೆ ಮತ್ತು ಲೋಕಸಬಾ ಚುನಾವಣೆಯನ್ನ ಬಹಿಷ್ಕರಿಸಿದ್ದರು, ಅಧಿಕಾರಿಗಳು ಮನವೊಲೈಕೆಯ ನಂತರ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿದ್ದರು.

ಎರಡು ಗ್ರಾಮ ಪಂಚಾಯಿತಿಯ ಜನರು ಮೂರನೇ ಹಂತದ ನೀರು ಶುದ್ಧೀಕರಣ ಘಟಕಕ್ಕೆ ಬೇಡಿಕೆಯನ್ನ ಇಟ್ಟಿದ್ದರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎರಡನೇ ಹಂತದ ನೀರು ಶುದ್ಧೀಕರಣ ಘಟಕ ಸ್ಥಾಪಿಸುವ ಭರವಸೆಯನ್ನ ನೀಡಿದ್ದರು, ಅದರಂತೆ 130.50 ಕೋಟಿಯ ಕ್ರಿಯಾಯೋಜನೆ ತಯಾರಾಗಿದೆ. ಸದ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಚಿಕ್ಕತುಮಕೂರು ಕೆರೆಯಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕ(STP) ಬಂದ್ ಮಾಡುವಂತೆ ಸೂಚನೆ ನೀಡಿದೆ, ನಾವು ಸಹ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಒಳಚರಂಡಿ ಸಂಸ್ಕರಣಾ ಘಟಕ(STP) ಬದಲಾಯಿಸಲು ಮತ್ತು 130.50 ಕೋಟಿ ಲಕ್ಷದ ಮೂರನೇ ಹಂತದ ಶುದ್ಧೀಕರಣ ಘಟಕ ಟೆಂಡರ್ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಪ್ರಶ್ನೆ ಮಾಡಿದರು.

ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು 130.50 ಕೋಟಿ ಕ್ರಿಯಾಯೋಜನೆ ಟೆಂಡರ್ ನಮ್ಮ ಮುಂದೆ ಬದಿಲ್ಲ, ಆ ಬಗ್ಗೆ ಅಧಿಕಾರಿಗಳ ಬಗ್ಗೆ ಚರ್ಚಿಸಲಾಗವುದು, ಇದು ದೊಡ್ಡಮೊತ್ತದ ಯೋಜನೆಯಾಗಿದ್ದು, ಹಣಕಾಸಿನ ಲಭ್ಯತೆ ನೋಡಿ ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

10 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

12 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

17 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago