Categories: ಕೋಲಾರ

ನಗರಸಭೆಯ ಮೈನಾರಿಟಿಯಲ್ಲಿನ 10 ಕೋಟಿ ಅನುದಾನದ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಹತ್ತು ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಭೂಮಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನಕ್ಕೆ ಉಪಯೋಗವಾಗುವ ಕೆಲಸಕ್ಕೆ ಸದಾಕಾಲವೂ ಬೆಂಬಲವಾಗಿ ಇರಬೇಕು ಯಾರು ಕೂಡ ಸ್ವಂತಿಕೆಗೆ ಮಾಡುತಿಲ್ಲ ಸಾರ್ವಜನಿಕ ಉಪಯೋಗಕ್ಕೆ ಮಾಡಿದ್ದು ಸ್ಥಳೀಯರೇ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು ಮಳೆ ನೀರು ಚರಂಡಿ ಮೂಲಕ ಸರಾಗವಾಗಿ ಹರಿಯುವಂತೆ ಮುಂಚಿತವಾಗಿಯೇ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು ಆದಷ್ಟು ಬೇಗ ಕಾಮಗಾರಿಗಳಿಗೆ ಪ್ರಾರಂಭಿಸಿ ಗುಣಮಟ್ಟದಿಂದ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು

ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಚಿವ ಜಮೀರ್ ಅಹಮ್ಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮುತುವರ್ಜಿಯಿಂದ 10 ಕೋಟಿ ರೂ. ಅನುದಾನ ಬಿಡುಗೆಯಾಗಿದೆ ಅನುದಾನ ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದು ಅಭಿವೃದ್ಧಿ ನಮ್ಮ ಗುರಿಯಾಗಿದೆ ನಾವು ಯಾವುದೇ ಕಮಿಷನ್ ಪಡೆಯಲ್ಲ ನೀವು ಅಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಆಯುಕ್ತ ಪ್ರಸಾದ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ನಗರಸಭೆ ಸದಸ್ಯರಾದ ಸೈಯದ್ ಹಿದಾಯಿತ್, ಮುರಳಿಗೌಡ, ಗುಣಶೇಖರ್, ಖಮರ್, ತಾಲೂಕು ವೈದ್ಯಾಧಿಕಾರಿ ನಾರಾಯಣಸ್ವಾಮಿ, ಮುಖಂಡರಾದ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

13 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago