ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಹತ್ತು ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಭೂಮಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನಕ್ಕೆ ಉಪಯೋಗವಾಗುವ ಕೆಲಸಕ್ಕೆ ಸದಾಕಾಲವೂ ಬೆಂಬಲವಾಗಿ ಇರಬೇಕು ಯಾರು ಕೂಡ ಸ್ವಂತಿಕೆಗೆ ಮಾಡುತಿಲ್ಲ ಸಾರ್ವಜನಿಕ ಉಪಯೋಗಕ್ಕೆ ಮಾಡಿದ್ದು ಸ್ಥಳೀಯರೇ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು ಮಳೆ ನೀರು ಚರಂಡಿ ಮೂಲಕ ಸರಾಗವಾಗಿ ಹರಿಯುವಂತೆ ಮುಂಚಿತವಾಗಿಯೇ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು ಆದಷ್ಟು ಬೇಗ ಕಾಮಗಾರಿಗಳಿಗೆ ಪ್ರಾರಂಭಿಸಿ ಗುಣಮಟ್ಟದಿಂದ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು
ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಚಿವ ಜಮೀರ್ ಅಹಮ್ಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮುತುವರ್ಜಿಯಿಂದ 10 ಕೋಟಿ ರೂ. ಅನುದಾನ ಬಿಡುಗೆಯಾಗಿದೆ ಅನುದಾನ ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದು ಅಭಿವೃದ್ಧಿ ನಮ್ಮ ಗುರಿಯಾಗಿದೆ ನಾವು ಯಾವುದೇ ಕಮಿಷನ್ ಪಡೆಯಲ್ಲ ನೀವು ಅಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಆಯುಕ್ತ ಪ್ರಸಾದ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ನಗರಸಭೆ ಸದಸ್ಯರಾದ ಸೈಯದ್ ಹಿದಾಯಿತ್, ಮುರಳಿಗೌಡ, ಗುಣಶೇಖರ್, ಖಮರ್, ತಾಲೂಕು ವೈದ್ಯಾಧಿಕಾರಿ ನಾರಾಯಣಸ್ವಾಮಿ, ಮುಖಂಡರಾದ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಮುಂತಾದವರು ಇದ್ದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…