ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಹತ್ತು ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಭೂಮಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನಕ್ಕೆ ಉಪಯೋಗವಾಗುವ ಕೆಲಸಕ್ಕೆ ಸದಾಕಾಲವೂ ಬೆಂಬಲವಾಗಿ ಇರಬೇಕು ಯಾರು ಕೂಡ ಸ್ವಂತಿಕೆಗೆ ಮಾಡುತಿಲ್ಲ ಸಾರ್ವಜನಿಕ ಉಪಯೋಗಕ್ಕೆ ಮಾಡಿದ್ದು ಸ್ಥಳೀಯರೇ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು ಮಳೆ ನೀರು ಚರಂಡಿ ಮೂಲಕ ಸರಾಗವಾಗಿ ಹರಿಯುವಂತೆ ಮುಂಚಿತವಾಗಿಯೇ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು ಆದಷ್ಟು ಬೇಗ ಕಾಮಗಾರಿಗಳಿಗೆ ಪ್ರಾರಂಭಿಸಿ ಗುಣಮಟ್ಟದಿಂದ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು
ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಚಿವ ಜಮೀರ್ ಅಹಮ್ಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮುತುವರ್ಜಿಯಿಂದ 10 ಕೋಟಿ ರೂ. ಅನುದಾನ ಬಿಡುಗೆಯಾಗಿದೆ ಅನುದಾನ ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದು ಅಭಿವೃದ್ಧಿ ನಮ್ಮ ಗುರಿಯಾಗಿದೆ ನಾವು ಯಾವುದೇ ಕಮಿಷನ್ ಪಡೆಯಲ್ಲ ನೀವು ಅಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಆಯುಕ್ತ ಪ್ರಸಾದ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ನಗರಸಭೆ ಸದಸ್ಯರಾದ ಸೈಯದ್ ಹಿದಾಯಿತ್, ಮುರಳಿಗೌಡ, ಗುಣಶೇಖರ್, ಖಮರ್, ತಾಲೂಕು ವೈದ್ಯಾಧಿಕಾರಿ ನಾರಾಯಣಸ್ವಾಮಿ, ಮುಖಂಡರಾದ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…