Categories: ಕೋಲಾರ

ನಗರಸಭೆಯ ಮೈನಾರಿಟಿಯಲ್ಲಿನ 10 ಕೋಟಿ ಅನುದಾನದ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಹತ್ತು ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಭೂಮಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನಕ್ಕೆ ಉಪಯೋಗವಾಗುವ ಕೆಲಸಕ್ಕೆ ಸದಾಕಾಲವೂ ಬೆಂಬಲವಾಗಿ ಇರಬೇಕು ಯಾರು ಕೂಡ ಸ್ವಂತಿಕೆಗೆ ಮಾಡುತಿಲ್ಲ ಸಾರ್ವಜನಿಕ ಉಪಯೋಗಕ್ಕೆ ಮಾಡಿದ್ದು ಸ್ಥಳೀಯರೇ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು ಮಳೆ ನೀರು ಚರಂಡಿ ಮೂಲಕ ಸರಾಗವಾಗಿ ಹರಿಯುವಂತೆ ಮುಂಚಿತವಾಗಿಯೇ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದು ಆದಷ್ಟು ಬೇಗ ಕಾಮಗಾರಿಗಳಿಗೆ ಪ್ರಾರಂಭಿಸಿ ಗುಣಮಟ್ಟದಿಂದ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು

ನಗರಸಭೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ
ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸಚಿವ ಜಮೀರ್ ಅಹಮ್ಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಮುತುವರ್ಜಿಯಿಂದ 10 ಕೋಟಿ ರೂ. ಅನುದಾನ ಬಿಡುಗೆಯಾಗಿದೆ ಅನುದಾನ ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದು ಅಭಿವೃದ್ಧಿ ನಮ್ಮ ಗುರಿಯಾಗಿದೆ ನಾವು ಯಾವುದೇ ಕಮಿಷನ್ ಪಡೆಯಲ್ಲ ನೀವು ಅಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಆಯುಕ್ತ ಪ್ರಸಾದ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ನಗರಸಭೆ ಸದಸ್ಯರಾದ ಸೈಯದ್ ಹಿದಾಯಿತ್, ಮುರಳಿಗೌಡ, ಗುಣಶೇಖರ್, ಖಮರ್, ತಾಲೂಕು ವೈದ್ಯಾಧಿಕಾರಿ ನಾರಾಯಣಸ್ವಾಮಿ, ಮುಖಂಡರಾದ ಖಯ್ಯಾಮ್, ಮೈಲಾಂಡಹಳ್ಳಿ ಮುರಳಿ, ಮುಂತಾದವರು ಇದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

25 minutes ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

29 minutes ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

32 minutes ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

2 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

3 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

7 hours ago