
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು ಸಿಹಿ ತಿನಿಸಿ ಶುಭಾಶಯ ಕೋರಿದರು ಹಾಗೂ ಅಭಿನಂದನೆ ಸಲ್ಲಿಸಿದರು. ನಗರಸಭೆಯ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸದ ಡಾ. ಕೆ. ಸುಧಾಕರ್, ಶಾಸಕ ಧೀರಜ್ ಮುನಿರಾಜ್, ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್, ಕೊನಘಟ್ಟ ರಾಜ್ಯದ ವನ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕ ಮಂಜುನಾಥ್ ಸೇರಿದಂತೆ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರ ಆಯ್ಕೆಯಿಂದ ನಗರಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯನ್ನು ಸ್ಥಳೀಯರು ವ್ಯಕ್ತಪಡಿಸಿದರು.