Categories: ಕೋಲಾರ

ನಗರಸಭೆ ‘ಇ ಖಾತೆ’ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ- ಸಚಿವ ರಹೀಂ ಖಾನ್ ಭರವಸೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ ಖಾತೆ ಬಿ ಖಾತೆ ನೀಡಲು ಕಾಂಗ್ರೆಸ್ ಸರ್ಕಾರವು ಮುಂದಾಗಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.

ಶುಕ್ರವಾರ ಕೋಲಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಸಮಸ್ಯೆಗಳ ಆಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಬಿಎಂಪಿ ಹೊರತುಪಡಿಸಿ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿಯ ಅಕ್ರಮ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿ ಸೌಲಭ್ಯ ಪಡೆಯುತ್ತಿರುವ ಮಾಲೀಕರಿಗೆ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಸಂಪುಟ ಉಪಸಮಿತಿಯಲ್ಲಿ ತೀರ್ಮಾನವಾಗಿದ್ದು, ಮೂರು ತಿಂಗಳ ಒಳಗೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ದುಡಿಮೆಯಿಂದ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಲಾಗುತ್ತದೆ. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆ ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಸಹ ಎಲ್ಲಾ ಹಂತದಲ್ಲಿನ ಸಮಸ್ಯೆಗಳು ಮಾತ್ರ ಹಾಗೇ ಉಳಿದಿದೆ. ಸಮಸ್ಯೆಗಳಿಗೆ ದಾರಿ ಕಂಡುಹಿಡಿಯಲು ಪ್ರತಿ ಹಂತದಲ್ಲಿ ಮಾರ್ಗದರ್ಶನ ನೀಡಿ ಕೋಲಾರವನ್ನು ವಿಶೇಷ ಜಿಲ್ಲೆಯ ರೀತಿಯಲ್ಲಿ ಪರಿಗಣಿಸುವಂತೆ ಸಚಿವರಿಗೆ ಮನವಿ ಮಾಡಿದರು..

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಜಯದೇವ್, ಯಲ್ಲಪ್ಪ, ಮೈಲಾಂಡಹಳ್ಳಿ ಮುರಳಿ, ವೈ ಶಿವಕುಮಾರ್, ಯೂನಿಸ್ ಷರೀಫ್, ವೆಂಕಟಪತಿ, ಮುಂತಾದವರು ಇದ್ದರು,

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago