Categories: ಕೋಲಾರ

ನಗರಸಭೆ ‘ಇ ಖಾತೆ’ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ- ಸಚಿವ ರಹೀಂ ಖಾನ್ ಭರವಸೆ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ ಖಾತೆ ಬಿ ಖಾತೆ ನೀಡಲು ಕಾಂಗ್ರೆಸ್ ಸರ್ಕಾರವು ಮುಂದಾಗಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.

ಶುಕ್ರವಾರ ಕೋಲಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಸಮಸ್ಯೆಗಳ ಆಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಬಿಎಂಪಿ ಹೊರತುಪಡಿಸಿ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿಯ ಅಕ್ರಮ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿ ಸೌಲಭ್ಯ ಪಡೆಯುತ್ತಿರುವ ಮಾಲೀಕರಿಗೆ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಸಂಪುಟ ಉಪಸಮಿತಿಯಲ್ಲಿ ತೀರ್ಮಾನವಾಗಿದ್ದು, ಮೂರು ತಿಂಗಳ ಒಳಗೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ದುಡಿಮೆಯಿಂದ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಲಾಗುತ್ತದೆ. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆ ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಸಹ ಎಲ್ಲಾ ಹಂತದಲ್ಲಿನ ಸಮಸ್ಯೆಗಳು ಮಾತ್ರ ಹಾಗೇ ಉಳಿದಿದೆ. ಸಮಸ್ಯೆಗಳಿಗೆ ದಾರಿ ಕಂಡುಹಿಡಿಯಲು ಪ್ರತಿ ಹಂತದಲ್ಲಿ ಮಾರ್ಗದರ್ಶನ ನೀಡಿ ಕೋಲಾರವನ್ನು ವಿಶೇಷ ಜಿಲ್ಲೆಯ ರೀತಿಯಲ್ಲಿ ಪರಿಗಣಿಸುವಂತೆ ಸಚಿವರಿಗೆ ಮನವಿ ಮಾಡಿದರು..

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಜಯದೇವ್, ಯಲ್ಲಪ್ಪ, ಮೈಲಾಂಡಹಳ್ಳಿ ಮುರಳಿ, ವೈ ಶಿವಕುಮಾರ್, ಯೂನಿಸ್ ಷರೀಫ್, ವೆಂಕಟಪತಿ, ಮುಂತಾದವರು ಇದ್ದರು,

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

9 minutes ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

6 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

10 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

13 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago