ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು, ಬಿಜೆಪಿಯಿಂದ ವೆಂಕಟೇಶ್ (ಬಂತಿ) ಉಪಾಧ್ಯಕ್ಷ ಸ್ಥಾನದ ಕಣದಲ್ಲಿದ್ದರು, 31 ಸದಸ್ಯರ ಬಲವಿರುವ ನಗರಸಭೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ವೆಂಕಟೇಶ್ ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿ ಟಿ.ಆರ್ ಮಂಜುನಾಥ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಂತಿ ವೆಂಕಟೇಶರನ್ನು ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಸದಸ್ಯರು, ಜೆಡಿಎಸ್ ಮುಖಂಡರು ಅಭಿನಂದಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…