ನಗರಸಭೆ ಕಾನೂನು ಬಡವರಿಗೊಂದು, ಉಳ್ಳವರಿಗೊಂದು ಇದೆಯಾ..?- ಮಹಿಳಾ, ಮಕ್ಕಳು ಮತ್ತು ವಯೋವೃದ್ದರ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಪ್ರಶ್ನೆ

ದೊಡ್ಡಬಳ್ಳಾಪುರ: ನಗರದ 5ನೇ ವಾರ್ಡ್ ನಿವಾಸಿ ಯಶೋಧಮ್ಮ ಪರವಾಗಿ ಕೋರ್ಟ್ ಆದೇಶವಿದ್ದರೂ ನಗರಸಭೆ ಸದಸ್ಯೆಯೊಬ್ಬರ ಸಹೋದರ ರಘು‌ ಎಂಬಾತ ಅಮಾಯಕ ಮಹಿಳೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ, ಮಕ್ಕಳು ಮತ್ತು ವಯೋವೃದ್ದರ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಆರೋಪಿಸಿದರು.

ನಗರದ 4ನೇ ವಾರ್ಡಿನಲ್ಲಿರುವ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಗರಸಭೆ ಅಧಿಕಾರಿಗಳ ಕಾನೂನು ಬಡವರಿಗೊಂದು, ಉಳ್ಳವರಿಗೊಂದು ಇದೆಯಾ ಎಂದು ಪ್ರಶ್ನಿಸಿದರು.

ಮನೆ ನಿರ್ಮಿಸಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದೆ. ಆದರೂ ಆದರೂ ಉದ್ದೇಶ ಪೂರ್ವಕವಾಗಿ ಬಡಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದರು.

 ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರವಾನಗಿ ಪಡೆದು ಮನೆ ಕಟ್ಟಿಕೊಳ್ಳಲು ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಲ್ಲಿ ಈಗಾಗಲೇ ಸಾಲ ಸಹ ಮಂಜೂರಾಗಿದೆ. ನಮ್ಮ ಜಾಗದಲ್ಲಿ ನಾವು ಮನೆ ಕಟ್ಟಿಕೊಳ್ಳಲು ಅಡ್ಡಿಪಡಿಸುತ್ತಿರುವ ರಘು ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

 ಪತ್ರಿಕಾಗೋಷ್ಠಿಯಲ್ಲಿ ನೊಂದ ಮಹಿಳೆ ಯಶೋದಮ್ಮ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago