ದೊಡ್ಡಬಳ್ಳಾಪುರ: ನಗರದ 5ನೇ ವಾರ್ಡ್ ನಿವಾಸಿ ಯಶೋಧಮ್ಮ ಪರವಾಗಿ ಕೋರ್ಟ್ ಆದೇಶವಿದ್ದರೂ ನಗರಸಭೆ ಸದಸ್ಯೆಯೊಬ್ಬರ ಸಹೋದರ ರಘು ಎಂಬಾತ ಅಮಾಯಕ ಮಹಿಳೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ, ಮಕ್ಕಳು ಮತ್ತು ವಯೋವೃದ್ದರ ಹಿತರಕ್ಷಣಾ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಆರೋಪಿಸಿದರು.
ನಗರದ 4ನೇ ವಾರ್ಡಿನಲ್ಲಿರುವ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಗರಸಭೆ ಅಧಿಕಾರಿಗಳ ಕಾನೂನು ಬಡವರಿಗೊಂದು, ಉಳ್ಳವರಿಗೊಂದು ಇದೆಯಾ ಎಂದು ಪ್ರಶ್ನಿಸಿದರು.
ಮನೆ ನಿರ್ಮಿಸಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದೆ. ಆದರೂ ಆದರೂ ಉದ್ದೇಶ ಪೂರ್ವಕವಾಗಿ ಬಡಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದರು.
ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರವಾನಗಿ ಪಡೆದು ಮನೆ ಕಟ್ಟಿಕೊಳ್ಳಲು ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಲ್ಲಿ ಈಗಾಗಲೇ ಸಾಲ ಸಹ ಮಂಜೂರಾಗಿದೆ. ನಮ್ಮ ಜಾಗದಲ್ಲಿ ನಾವು ಮನೆ ಕಟ್ಟಿಕೊಳ್ಳಲು ಅಡ್ಡಿಪಡಿಸುತ್ತಿರುವ ರಘು ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನೊಂದ ಮಹಿಳೆ ಯಶೋದಮ್ಮ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…