ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ.

ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ ಕಾಟೇಜ್ ಮಾದರಿಯ ತಂಗುದಾಣದಲ್ಲಿ ವಾಯು ವಿಹಾರಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಕಡಪಾ ಕಲ್ಲಿನ ಬೆಂಚುಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನು ಸಹ  ಕಲ್ಲಿನಿಂದ ಜಜ್ಜಿ ಧ್ವಂಸ ಮಾಡಿದ್ದರು. ಇದೀಗ ಮತ್ತೆ ಈ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ.

12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳನ್ನ ಹೊಡೆದುರುಳಿಸಿದ್ದಾರೆ. ಈ ಕುರಿತು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿದ್ದಾರೆ. ಉದ್ಯಾನವನದಲ್ಲಿ ಸಿಸಿಟಿವಿ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ.

ಅಕ್ಷಮ್ಯ ಕೃತ್ಯದ ಹಿಂದೆ ಯಾರೇ ಇದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago