ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ.

ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ ಕಾಟೇಜ್ ಮಾದರಿಯ ತಂಗುದಾಣದಲ್ಲಿ ವಾಯು ವಿಹಾರಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಕಡಪಾ ಕಲ್ಲಿನ ಬೆಂಚುಗಳನ್ನು ನಿರ್ಮಿಸಲಾಗಿತ್ತು. ಅವುಗಳನ್ನು ಸಹ  ಕಲ್ಲಿನಿಂದ ಜಜ್ಜಿ ಧ್ವಂಸ ಮಾಡಿದ್ದರು. ಇದೀಗ ಮತ್ತೆ ಈ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ.

12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳನ್ನ ಹೊಡೆದುರುಳಿಸಿದ್ದಾರೆ. ಈ ಕುರಿತು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿದ್ದಾರೆ. ಉದ್ಯಾನವನದಲ್ಲಿ ಸಿಸಿಟಿವಿ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ.

ಅಕ್ಷಮ್ಯ ಕೃತ್ಯದ ಹಿಂದೆ ಯಾರೇ ಇದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

12 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

14 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

18 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

19 hours ago