ನಗರಸಭೆ ಮುಂಭಾಗದಲ್ಲಿ ಬಾಂಬೆ ಗಣೇಶಮೂರ್ತಿಗಳ ಮಾರಾಟ: ನಗರಸಭೆ ಅಧಿಕಾರಿಗಳಿಂದ ಬಾಂಬೆ ಗಣೇಶಮೂರ್ತಿಗಳ‌ ಜಪ್ತಿ

ಪರಿಸರ ಮಾಲಿನ್ಯ ಉಂಟುಮಾಡುವ ಬಾಂಬೆ ಗಣೇಶ, ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಆದೇಶಕ್ಕೆ ಕ್ಯಾರೆ ಎನ್ನದೇ ನಗರದ ನಗರಸಭೆ ಮುಂಭಾಗದಲ್ಲಿ ಬಾಂಬೆ ಗಣೇಶಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಬಾಂಬೆ ಗಣೇಶಮೂರ್ತಿಗಳನ್ನ ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ನಗರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಬಿದಿರು ಮತ್ತು ಹುಲ್ಲಿನಿಂದ ಮಾಡಲಾಗಿದ್ದ ಅಪಾಯಾಕಾರಿ ಬಣ್ಣಗಳಿಂದ ಕೂಡಿದ ಗಣೇಶಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತು ಪರಿಸರ ಪ್ರೇಮಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪೌರಾಯುಕ್ತರಾದ ಕಾರ್ತಿಕೇಶ್ವರ್ ದಾಳಿ ನಡೆಸಿ ಮಾರಾಟಕ್ಕೆಂದು ಇಡಲಾಗಿದ್ದ ಬಾಂಬೆ ಗಣೇಶಮೂರ್ತಿಗಳನ್ನ ಜಪ್ತಿ ಮಾಡಿದ್ದಾರೆ.

ಈ ವೇಳೆ ಪರಿಸರ ಪ್ರೇಮಿ ಚಿದಾನಂದ್, ಸಾಮಾಜಿಕ ಹೋರಾಟಗಾರರಾದ ಗಿರೀಶ್ ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

11 minutes ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

3 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

4 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

12 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

22 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

23 hours ago