ನಗರಸಭೆ ಸದಸ್ಯರಾದ ರಜನಿ, ನಾಗರತ್ನಮ್ಮ ನಡುವೆ ತಿಕ್ಕಾಟ: ಮೂಲಭೂತ ಸೌಕರ್ಯಗಳಿಂದ ವಂಚಿತರಾದ ರೋಜಿಪುರದ ಒಂದನೇ ಮುಖ್ಯರಸ್ತೆ ನಿವಾಸಿಗಳು

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯಲ್ಲಿ ಕಾಲಕ್ಕೆ ತಕ್ಕಂತೆ ರಸ್ತೆ ದುರಸ್ತಿ, ಚರಂಡಿ‌ ದುರಸ್ತಿಯಾಗುತ್ತಿಲ್ಲ, ವಿದ್ಯುತ್ ಬಲ್ಬ್, ಚರಂಡಿ ಸ್ವಚ್ಛತೆ, ಕುಡಿಯುವ ನೀರಿನ ಸಮಸ್ಯೆ, ಕಸದ ಸಮಸ್ಯೆ ತಾಂಡವಾಡುತ್ತಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ರೋಜಿಪುರ ಕೌನ್ಸಿಲರ್ ರಜನಿ ಸುಬ್ರಮಣಿ, ವಿನಾಯಕನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಹೇಳುತ್ತಿದ್ದಾರೆ. ಇವರಿಬ್ಬರ ಗೊಂದಲ, ಕಿತ್ತಾಟ, ತಿಕ್ಕಾಟದಲ್ಲಿ ಈ ರಸ್ತೆಯಲ್ಲಿ ವಾಸ ಮಾಡುವ ನಮಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ರೋಜಿಪುರ ಹಾಗೂ ವಿನಾಯಕನಗರ ವಾರ್ಡ್ ನವರು ಬರುತ್ತಾರೆ. ಗೆದ್ದ ನಂತರ ಈ ರಸ್ತೆ ನಮಗೆ ಬರೋದಿಲ್ಲ ಎಂದು ಹೇಳಿ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಕಣ್ಮುಚ್ಚಿ ಕುಳಿತುಕೊಳ್ಳುತ್ತಾರೆ ಎಂದು ಪ್ರದೀಪ್ ಆರೋಪಿಸಿದರು‌.

ರಸ್ತೆಯು ಚರಂಡಿಗಿಂತ ಮೇಲ್ಮಟದಲ್ಲಿದೆ. ಚರಂಡಿಯಲ್ಲಿ ಗಿಡಗಂಟಿಗಳು, ಮಣ್ಣು ಸೇರಿದಂತೆ ಕಸಕಡ್ಡಿ‌ ತುಂಬಿಕೊಂಡು ಚರಂಡಿ ಇರೋದು ಕಾಣೋದೇ ಇಲ್ಲ. ಈ‌ ಕಾರಣ ಮಳೆ‌ ನೀರು ಸಾರಾಗವಾಗಿ ಹರಿಯದೇ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತದೆ‌. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತದೆ ಎಂದರು.

ಮನೆಗಳ ಮೇಲೆ ದೊಡ್ಡ ರೆಂಬೆಕೊಂಬೆಗಳು ಹಾದುಹೊಗಿವೆ ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲ. ಕಳ್ಳರ ಕಾಟ ಹೆಚ್ಚಾಗಿದೆ. ಹಾವುಗಳು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕಸ ಸೂಕ್ತ ರೀತಿಯಲ್ಲಿ ವಿಲೇವಾರಿಯಾಗದ ಕಾರಣ ದುರ್ವಾಸನೆ ಹೆಚ್ಚಾಗಿದೆ. ಕಸ ತಿನ್ನಲು ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಕಾಟಕ್ಕೆ ಮಕ್ಕಳು ಓಡಾಡಲು ಭಯಪಡುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳುವುದು. ನಾವು ಕಂದಾಯ ಕಟ್ಟಲ್ವಾ…? ನೀರಿನ ಬಿಲ್ ಕಟ್ಟಲ್ವಾ…? ವಿದ್ಯುತ್ ಬಿಲ್ ಕಟ್ಟಲ್ವಾ…? ಮತ್ತೆ ನಮಗೇಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಮೊದಲು ನಮ್ಮ ರಸ್ತೆಯನ್ನು ಯಾವುದಾದರು ಒ‍ಂದು ವಾರ್ಡ್ ಗೆ ಸೇರಿಸಬೇಕು. ನಮಗೆ ಕೌನ್ಸಿಲರ್ ಯಾರೆಂದು ತಿಳಿಸಬೇಕು. ತದನಂತರ ನಮಗೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು….

ಈ ಕುರಿತು ವಿನಾಯಕ ನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಮಾತನಾಡಿ, ಚೆಕ್ ಬಂದಿ ಪ್ರಕಾರ ಈ ರಸ್ತೆ ವಿನಾಯಕನಗರ ವಾರ್ಡ್ ಗೆ ಬರೋದಿಲ್ಲ.‌ ಒಂದು ವೇಳೆ ನಾವು ಆ ವಾರ್ಡ್ ನಸಮಸ್ಯೆ ಬಗೆಹರಿಸಲು ಹೋದಾಗ ಅಲ್ಲಿನ‌ ಸದಸ್ಯೆರು ಆಕ್ಷೇಪಣೆ ವ್ಯಕ್ತಪಡಿಸುತ್ತಾರೆ. ಆದ್ದರಿಂದ ನಾವು ಈ ರಸ್ತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗುವುದಿಲ್ಲ ಎಂದು ಹೇಳಿದರು.

ರೋಜಿಪುರ ವಾರ್ಡ್ ಸದಸ್ಯೆ ರಜನಿ ಸುಬ್ರಮಣಿ ಮಾತನಾಡಿ, ಈ ರಸ್ತೆಯಲ್ಲಿನ ನಿವಾಸಿಗಳು ವಿನಾಯಕ ನಗರ ವಾರ್ಡ್ ಮತಗಟ್ಟೆಗೆ ಸೇರುತ್ತಾರೆ. ಮತದಾನವನ್ನು ಸಹ ಆ ವಾರ್ಡ್ ಸದಸ್ಯರಿಗೆ ಹಾಕಿರುತ್ತಾರೆ. ಆದ್ದರಿಂದ ವಿನಾಯಕ ನಗರದ ಸದಸ್ಯರೇ ಅಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಹೇಳಿದರು….

ಒಟ್ಟಿನಲ್ಲಿ ರೋಜಿಪುರ ವಾರ್ಡ್, ವಿನಾಯಕ ನಗರ ವಾರ್ಡ್ ಕೌನ್ಸಿಲರ್ ಗಳ ಗೊಂದಲ, ತಿಕ್ಕಾಟ, ಕಿತ್ತಾಟದಿಂದ ಇಲ್ಲಿನ ನಿವಾಸಿಗಳು ಮೂಲಭೂತ ಸವಲತ್ತುಗಳು ಇಲ್ಲದೇ ತೀವ್ರ ತೊಂದರೆಗೆ ಸಿಲುಕಿದ್ದಾರೆ….

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

1 hour ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

2 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

6 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

7 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago